Advertisement

ಜೂ. 11: ಶಕ್ತಿ ಯೋಜನೆಗೆ ಚಾಲನೆ: ಸಚಿವ ರಾಮಲಿಂಗಾರೆಡ್ಡಿ

10:58 PM Jun 06, 2023 | Team Udayavani |

ಬೆಂಗಳೂರು: ಸರಕಾರದ ನೂತನ ಶಕ್ತಿ ಯೋಜನೆಗೆ ಜೂ.11ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Advertisement

ಪತ್ರಕರ್ತರ ಜತೆ ಅವರು ಮಾತನಾಡಿ, ಆ ದಿನ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಶಾಸಕರು ಚಾಲನೆ ನೀಡಲಿದ್ದಾರೆ. ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಸ್ಮಾರ್ಟ್‌ಕಾರ್ಡ್‌ ನೀಡಲಾಗುವುದು ಎಂದರು.

ಸ್ಮಾರ್ಟ್‌ ಕಾರ್ಡ್‌ಗೆ ಸೇವಾಸಿಂಧು ಆ್ಯಪ್‌ ಮೂಲಕ ಅರ್ಜಿ ಹಾಕಬೇಕು. 3 ತಿಂಗಳೊಳಗೆ ಅರ್ಜಿ ಹಾಕಿ ಸ್ಮಾರ್ಟ್‌ ಕಾರ್ಡ್‌ ಪಡೆದುಕೊಳ್ಳಬೇಕು. ಸ್ಮಾರ್ಟ್‌ ಕಾರ್ಡ್‌ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದರು.

ಸ್ಮಾರ್ಟ್‌ ಕಾರ್ಡ್‌ ನೀಡುವವರೆಗೂ ಮಹಿಳೆಯರು ಆಧಾರ್‌ ಕಾರ್ಡ್‌ ಸೇರಿದಂತೆ ಇನ್ನಿತರ ಗುರುತಿನ ಚೀಟಿಯನ್ನು ಪಡೆದೆ ಬಸ್‌ನಲ್ಲಿ ಪ್ರಯಾಣಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next