Advertisement

ಜೂ. 11: ಶಕ್ತಿ ಯೋಜನೆಗೆ ಚಾಲನೆ: ಸಚಿವ ರಾಮಲಿಂಗಾರೆಡ್ಡಿ

10:58 PM Jun 06, 2023 | Team Udayavani |

ಬೆಂಗಳೂರು: ಸರಕಾರದ ನೂತನ ಶಕ್ತಿ ಯೋಜನೆಗೆ ಜೂ.11ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Advertisement

ಪತ್ರಕರ್ತರ ಜತೆ ಅವರು ಮಾತನಾಡಿ, ಆ ದಿನ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಶಾಸಕರು ಚಾಲನೆ ನೀಡಲಿದ್ದಾರೆ. ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಸ್ಮಾರ್ಟ್‌ಕಾರ್ಡ್‌ ನೀಡಲಾಗುವುದು ಎಂದರು.

ಸ್ಮಾರ್ಟ್‌ ಕಾರ್ಡ್‌ಗೆ ಸೇವಾಸಿಂಧು ಆ್ಯಪ್‌ ಮೂಲಕ ಅರ್ಜಿ ಹಾಕಬೇಕು. 3 ತಿಂಗಳೊಳಗೆ ಅರ್ಜಿ ಹಾಕಿ ಸ್ಮಾರ್ಟ್‌ ಕಾರ್ಡ್‌ ಪಡೆದುಕೊಳ್ಳಬೇಕು. ಸ್ಮಾರ್ಟ್‌ ಕಾರ್ಡ್‌ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದರು.

ಸ್ಮಾರ್ಟ್‌ ಕಾರ್ಡ್‌ ನೀಡುವವರೆಗೂ ಮಹಿಳೆಯರು ಆಧಾರ್‌ ಕಾರ್ಡ್‌ ಸೇರಿದಂತೆ ಇನ್ನಿತರ ಗುರುತಿನ ಚೀಟಿಯನ್ನು ಪಡೆದೆ ಬಸ್‌ನಲ್ಲಿ ಪ್ರಯಾಣಿಸಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next