Advertisement

ಕೈ ಕೊಟ್ಟ ಪ್ರಿಯತಮ : ನೇಣಿಗೆ ಕೊರಳೊಡ್ಡಿದ ಜ್ಯೂನಿಯರ್ ಆರ್ಟಿಸ್ಟ್

05:18 PM Sep 30, 2021 | Team Udayavani |

ಹೈದರಾಬಾದ್ : ಬಾಯ್‍ಫ್ರೆಂಡ್ ಕೈ ಕೊಟ್ಟಿದ್ದಕ್ಕೆ ಮನನೊಂದು ತೆಲುಗು ಚಿತ್ರರಂಗದ ಜ್ಯೂನಿಯರ್ ಆರ್ಟಿಸ್ಟ್ ಅನುರಾಧ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

Advertisement

ಸಾಕಷ್ಟು ಸಿನಿಮಾಗಳಲ್ಲಿ ಸಹ ಕಲಾವಿದೆಯಾಗಿ ನಟಿಸಿದ್ದ ಅನುರಾಧ, ಕಿರಣ್ ಎಂಬುವರನ್ನು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು. ಈತನನ್ನೆ ಮದುವೆಯಾಗಬೇಕೆಂದು ಬಯಸಿದ್ದಳು. ಆದರೆ, ಮದುವೆಗೆ ನಿರಾಕರಿಸಿದ ಕಿರಣ, ಈಕೆಗೆ ಕೈ ಕೊಟ್ಟಿದ್ದರು. ಇದರಿಂದ ಮನನೊಂದಿದ್ದ ಅನುರಾಧ ಹೈದರಾಬಾದ್‍ನ ಬಂಜಾರಾ ಹಿಲ್ಸ್ ನಲ್ಲಿರುವ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.

ಅನುರಾಧ ನಾಲ್ಕು ದಿನಗಳಿಂದ ಮನೆಯಿಂದ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಗ ಬಾಗಿಲು ಮುರಿದು ಒಳ ಪ್ರವೇಶಿಸಿದ್ದರು. ಈ ವೇಳೆ ನಟಿ ಅನುರಾಧ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಲ್ಲಿಂಗ್ ಫ್ಯಾನ್‍ಗೆ ನೇತಾಡುತ್ತಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕನ್ನಡದ ನಟಿಯೂ ಆತ್ಮಹತ್ಯೆ :

ಇನ್ನು ಗುರುವಾರ ಕನ್ನಡ ಚಿತ್ರರಂಗದ ನಟಿ ಸೌಜನ್ಯಾ(ಸವಿ ಮಾದಪ್ಪ) ಅವರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದು ಸಾವಿಗೆ ಶರಣಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next