Advertisement

ಸುಮ್ಮನೆ ಕೂರುವುದಿಲ್ಲ:ಶಾಸಕಿ ಲಕ್ಷ್ಮಿ ಹೆಬ್ಟಾಳಕರ

06:30 AM Jun 07, 2018 | |

ಬೆಳಗಾವಿ: “ನನ್ನ ಹಿರಿತನ ಪರಿಗಣಿಸಿ ಸಚಿವ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸ ಇತ್ತು. ಎಲ್ಲರೂ ಭರವಸೆ ನೀಡಿದ್ದರು. ಆದರೆ, ಏಕೆ ಕೈತಪ್ಪಿತೋ ಗೊತ್ತಿಲ್ಲ. ಆದರೆ, ನಾನು ಇಷ್ಟಕ್ಕೆ ಸುಮ್ಮನೆಕೂರುವುದಿಲ್ಲ’ ಎಂದು ಸಚಿವ ಸ್ಥಾನ ವಂಚಿತ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಹೇಳಿದ್ದಾರೆ.

Advertisement

“ನಾನು ಕಾಂಗ್ರೆಸ್‌ ಪಕ್ಷದ ಸಾಮಾನ್ಯ ಕಾರ್ಯಕರ್ತೆ. ಪಕ್ಷದ ನಿರ್ಧಾರಕ್ಕೆ ಬದ್ಧಳಾಗಿದ್ದೇನೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆಯಾಗಿದೆ. ಆದರೆ, ಸಚಿವರಾಗಲು ಏನು ಮಾನದಂಡ ಇರಬೇಕು ಎಂಬುದನ್ನು ಹುಡುಕುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯರಿಗೆ ಸಚಿವ ಸ್ಥಾನ ಇಲ್ಲ ಎಂದಿದ್ದರು. ಆದರೆ,ಜಯಮಾಲಾ ಅವರನ್ನು ಸಚಿವರನ್ನಾಗಿ ಮಾಡಿದರು. ಬಹುಶ: ಅವರಿಂದ ಪಕ್ಷಕ್ಕೆ ಅನುಕೂಲವಾಗಬಹುದು ಎಂಬ ಲೆಕ್ಕಾಚಾರ ಇರಬಹುದು. ಹೀಗಾಗಿ ಜಯಮಾಲಾ ಅವರನ್ನು ಸಚಿವರನ್ನಾಗಿ ಮಾಡಿದ್ದಾರೆ.ಅವರಿಗೆ ಒಳ್ಳೆಯದಾಗಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next