Advertisement

ಪೊಲೀಸ್‌ ದೂರು ಪ್ರಾಧಿಕಾರ ಅಧ್ಯಕ್ಷರಾಗಿ ನ್ಯಾ.ಕುಮಾರಸ್ವಾಮಿ

11:11 PM Aug 06, 2019 | Lakshmi GovindaRaj |

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರನ್ನಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಿ.ಆರ್‌. ಕುಮಾರಸ್ವಾಮಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲರಾದ ಸುಧಾ ಕಾಟವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಈ ಮಾಹಿತಿ ನೀಡಿದೆ.

Advertisement

ಪೊಲೀಸ್‌ ದೂರು ಪ್ರಾಧಿಕಾರದ ಮುಖ್ಯಸ್ಥರ ಹುದ್ದೆ ಕಳೆದ ಒಂದೂವರೆ ವರ್ಷದಿಂದ ಖಾಲಿ ಇದೆ. ಪ್ರಾಧಿಕಾರದ ಅಧ್ಯಕ್ಷರಾಗಿದ್ದ ನ್ಯಾ. ಎ.ಎಸ್‌. ಪಾಚ್ಚಾಪೂರೆ ಅವರು 2017ರ ಆ.7ರಂದು ರಾಜೀನಾಮೆ ನೀಡಿದ್ದಾರೆ. ಈವರೆಗೂ ಆ ಹುದ್ದೆಯನ್ನು ಸರ್ಕಾರ ಭರ್ತಿ ಮಾಡಿಲ್ಲ. ಅಲ್ಲದೇ ಕಚೇರಿಗೆ ಸೂಕ್ತ ಮೂಲ ಸೌಕರ್ಯ ಒದಗಿಸಿಲ್ಲ. ಆದಷ್ಟು ಬೇಗ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಿಸಿ, ಸಿಬ್ಬಂದಿ ಹಾಗೂ ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸು ವಂತೆ ಅರ್ಜಿದಾರರ ಪರ ವಕೀಲ ಎಸ್‌. ಉಮಾಪತಿ ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next