Advertisement

ನ್ಯಾಯಮೂರ್ತಿ ನೇಮಕ: ಕರ್ನಾಟಕದ ಮುಖ್ಯ ನ್ಯಾಯಮೂರ್ತಿ ನ್ಯಾ|ರಿತು ರಾಜ್‌ ಅವಸ್ಥಿ

01:43 AM Sep 18, 2021 | Team Udayavani |

ಹೊಸದಿಲ್ಲಿ: ದೇಶದ ವಿವಿಧ ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಯಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ ಲಭಿಸಿದೆ. ಗುಜರಾತ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಅರವಿಂದ ಕುಮಾರ್‌, ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಆರ್‌.ವಿ. ಮಳೀಮಠ ಅವರನ್ನು ನೇಮಿಸಲು ಶಿಫಾರಸು ಮಾಡಲಾಗಿದೆ.
ಸಿಜೆಐ ಎನ್‌.ವಿ. ರಮಣ ನೇತೃತ್ವದ ಕೊಲೀಜಿಯಂ ಗುರುವಾರ ಮತ್ತು ಶುಕ್ರವಾರ ಸಭೆ ನಡೆಸಿ ಈ ನೇಮಕಗಳನ್ನು ಅಂತಿಮಗೊಳಿಸಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ. ಜತೆಗೆ ಐದು ಹೈಕೋರ್ಟ್‌ ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.

Advertisement

ಕರ್ನಾಟಕ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್‌ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಅವರನ್ನು ನೇಮಿಸಲಾಗಿದೆ. ಈ ಮೂಲಕ ದೇಶದ ಹೈಕೋರ್ಟ್‌ಗಳಲ್ಲಿ ತೆರವಾಗಿದ್ದ ನ್ಯಾಯಮೂರ್ತಿಗಳ ಹುದ್ದೆ ತುಂಬಲು ಕೊಲೀಜಿಯಂ ಕ್ರಮ ಕೈಗೊಂಡಿದೆ.

ನ್ಯಾ| ಆರ್‌.ವಿ. ಮಳೀಮಠ
ನ್ಯಾ| ರವಿ ವಿಜಯ ಕುಮಾರ್‌ ಮಳೀಮಠ 2010ರಲ್ಲಿ ಕರ್ನಾಟಕ ಹೈಕೋರ್ಟ್‌ನ ಶಾಶ್ವತ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2019 ರಲ್ಲಿ ಹಿಮಾಚಲ ಹೈಕೋರ್ಟ್‌, ಇದೇ ಜುಲೈಯಲ್ಲಿ ಉತ್ತರಾಖಂಡ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ನ್ಯಾ| ಅರವಿಂದ್‌ ಕುಮಾರ್‌
ನ್ಯಾ| ಅರವಿಂದ ಕುಮಾರ್‌ ಸಿಬಿಐ ವಿಶೇಷ ವಕೀಲರಾಗಿದ್ದವರು. 2009ರಲ್ಲಿ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2012ರಲ್ಲಿ ಖಾಯಂ ನ್ಯಾಯಮೂರ್ತಿಯಾದರು.

Advertisement

Udayavani is now on Telegram. Click here to join our channel and stay updated with the latest news.

Next