Advertisement

#JusticeForKarnataka; ಸ್ತಬ್ಧಚಿತ್ರ ಸೇರಿಸಿ: ರಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

05:57 PM Jan 11, 2024 | Team Udayavani |

ಬೆಂಗಳೂರು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ರಕ್ಷಣ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ”ನಾನು ರಕ್ಷಣ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಪ್ರಮಾದವಲ್ಲ. ಇದು ನಮ್ಮ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ” ಎಂದು ಬರೆದಿದ್ದಾರೆ.

ಕರ್ನಾಟಕ ಈ ಹಿಂದೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ಈ ಬಾರಿ (2024) ”ಬ್ರ್ಯಾಂಡ್ ಬೆಂಗಳೂರು” ಥೀಮ್ ನಮ್ಮದಾಗಿತ್ತು. ರಕ್ಷಣ ಸಚಿವಾಲಯ ಕರೆದ ಎಲ್ಲ ಸಭೆಗಳಲ್ಲಿ ಕರ್ನಾಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಕೊನೆಯ ಸುತ್ತಿನ ಸಭೆಯ ಬಳಿಕ ಕರ್ನಾಟಕದ ಸ್ತಬ್ದ ಚಿತ್ರ ಪರಿಗಣಿಸಿಲ್ಲ. ಸ್ತಬ್ದ ಚಿತ್ರದ ಧ್ಯೇಯ ಅಪ್ರತಿಮ ನಗರ ಬೆಂಗಳೂರು ಹೇಗೆ ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದೆ ಮತ್ತು ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ದೃಢವಾಗಿ ಬೇರೂರಿದೆ ಎಂಬುದನ್ನು ಚಿತ್ರಿಸುತ್ತಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next