Advertisement

ಬಾಲಕನ ಬೆತ್ತಲು ಮಾಡಿ ಬಣ್ಣ ಹಾಕಿ ವಿಕೃತಿ: ಆರೋಪಿಯ ಬಂಧನ; ಆರಗ ಜ್ಞಾನೇಂದ್ರ

02:24 PM Mar 25, 2022 | Team Udayavani |

ವಿಧಾನಪರಿಷತ್ :ಬಸವನ ಬಾಗೇವಾಡಿ ತಾಲೂಕಿನಲ್ಲಿ, ಏಳು ವರ್ಷದ ಬಾಲಕನ ಮೇಲೆ ನಡೆದ ಅಮಾನುಷ ದೌರ್ಜನ್ಯ ಘಟನೆಯ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ ಅವರು ಶುಕ್ರವಾರ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.

Advertisement

ಸದನದ, ಶೂನ್ಯ ವೇಳೆಯಲ್ಲಿ, ಕಾಂಗ್ರೆಸ್ ಸದಸ್ಯ  ಪ್ರಕಾಶ್ ರಾಥೋಡ್, ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಸಾಮಾಜಿಕ ಜಾಲ ತಾಣ ದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ ಹಾಗೂ ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದರು.

ಪ್ರಕರಣದ ಬಗ್ಗೆ ತೀವ್ರ ನೋವಾಗಿದೆ, ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ವಿರೋಧ ಪಕ್ಷದ ನಾಯಕ ಬಿ.ಕೆ.  ಹರಿಪ್ರಸಾದ್ ಸಹ ಮಾತನಾಡಿ, ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು. ಸಭಾ ಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡ ಇಂಥ ಅಮಾನವೀಯ ಪ್ರಕರಣ ಗಳು ನಡೆಯಬಾರದು ಎಂದರು.

ವಡವಡಗಿ ಗ್ರಾಮದಲ್ಲಿ ಕೆಲವರನ್ನು ಅಶ್ಲೀಲವಾಗಿ ನಿಂದಿಸಿದ್ದ ಎಂದು ಅಪ್ರಾಪ್ತ ವಯಸ್ಕ ಬಾಲಕನೊಬ್ಬನನ್ನು ಬೆತ್ತಲೆ ಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಅಮಾನವೀಯ ಘಟನೆ ಬಸವಜನ್ಮಭೂಮಿ ಪರಿಸರದಲ್ಲಿ ನಡೆದಿತ್ತು. ಘಟನೆಯನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಇದೀಗ ವೈರಲ್ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next