Advertisement

370 ವಿಧಿ ರದ್ದು: ಕಾಂಗ್ರೆಸ್‌ನಲ್ಲೇ ಒಡಕು!

09:13 AM Aug 07, 2019 | mahesh |

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಕುರಿತಾಗಿ ಈಗ ಕಾಂಗ್ರೆಸ್‌ನಲ್ಲಿ ಒಡಕು ಇನ್ನಷ್ಟು ದೊಡ್ಡದಾಗಿದೆ. ಕಾಂಗ್ರೆಸ್‌ನ ಪ್ರಮುಖ ನೇತಾರ, ಕಾಂಗ್ರೆಸ್‌ನ ಪರಮೋತ್ಛ ನಾಯಕ ರಾಹುಲ್‌ ಗಾಂಧಿ ಅವರ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಅವರೇ 370 ರದ್ದತಿ ಪರ ಬ್ಯಾಟಿಂಗ್‌ ಮಾಡಿದ್ದಾರೆ.

Advertisement

ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್‌ ಪ್ರಾಂತ್ಯವನ್ನು ಭಾರತದೊಂದಿಗೆ ವಿಲಯನಗೊಳಿಸುವ 370 ರದ್ದತಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಈ ರದ್ದತಿ ವೇಳೆ ಸಾಂವಿಧಾನಿಕ ಪ್ರಕ್ರಿಯೆಗಳನ್ನು ಪಾಲಿಸಬೇಕಿತ್ತು. ಇದರಿಂದ ಯಾರೂ ಬಳಿಕ ಪ್ರಶ್ನೆಗಳನ್ನೇ ಕೇಳುತ್ತಿರಲಿಲ್ಲ. ಆದಾಗ್ಯೂ ಇದು ನಮ್ಮ ದೇಶದ ಹಿತಾಸಕ್ತಿಗೆ ಪೂರಕವಾದ್ದರಿಂದ ನಾನದನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.

ಹೀಗೆ ಪ್ರಧಾನಿ ನರೇಂದ್ರ ಮೋದಿ ಸರಕಾರದ ನಡೆ ಪರವಾಗಿ ಮಾತನಾಡಿರುವುದು ಇವರೇ ಮೊದಲೇನಲ್ಲ. ಹಿರಿಯ ಕಾಂಗ್ರೆಸ್‌ ನಾಯಕ ಜನಾರ್ದನ ದ್ವಿವೇದಿ ಅವರು ಸರಕಾರ ಐತಿಹಾಸಿಕ ತಪ್ಪನ್ನು ಸರಿಪಡಿಸಿದೆ ಎಂದು ಹೇಳಿದ್ದರು. ಜತೆಗೆ ಸಂಸದ ದೀಪೀಂದರ್‌ ಹೂಡಾ ಅವರೂ ನಾವು 21ನೇ ಶತಮಾನದಲ್ಲಿದ್ದೇವೆ. ಆದ್ದರಿಂದ ಇಂತಹ ವಿಧಿಯ ಅವಶ್ಯಕತೆಯೇ ಇಲ್ಲ ಎಂದು ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next