Advertisement

ಮಾಜಿ ಸಚಿವ, ಜಾತ್ಯಾತೀತ ಜನತಾದಳದ ಹಿರಿಯ ಮುಖಂಡ ಕೆ.ಅಮರನಾಥ ಶೆಟ್ಟಿ ನಿಧನ

10:01 AM Jan 28, 2020 | Mithun PG |

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ.

Advertisement

ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987 ಮತ್ತು 1994 ಹೀಗೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next