Advertisement

ಸಿಎಂ ಪರಿಹಾರ ನಿಧಿಗೆ ಸಚಿವ ನಾರಾಯಣ ಗೌಡ ವೈಯಕ್ತಿಕ 5 ಲಕ್ಷ ರೂ. ನೆರವು

03:33 PM Apr 10, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ  ಸಚಿವ ಡಾ. ಕೆ ಸಿ ನಾರಾಯಣಗೌಡ ಅವರು ವೈಯಕ್ತಿಕವಾಗಿ 5 ಲಕ್ಷ ರೂ. ನೀಡಿದ್ದಾರೆ.

Advertisement

ಇಂದು ಸಿಎಂ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಸಚಿವ ಡಾ. ಕೆ ಸಿ ನಾರಾಯಣಗೌಡ ರೂ. 5 ಲಕ್ಷ ದ ಚೆಕ್ ಅನ್ನು ಹಸ್ತಾಂತರಿಸಿದರು.

ರಾಜ್ಯದಲ್ಲಿ ಇದುವರೆಗೆ 207 ಜನರಿಗೆ ಕೋವಿಡ್-19 ಸೋಂಕು ತಾಗಿದ್ದು, ಅದರಲ್ಲಿ 30 ಜನರು ಗುಣಮುಖರಾಗಿದ್ದಾರೆ. ಒಟ್ಟು ಆರು ಜನರು ಸೋಂಕಿನ ಕಾರಣದಿಂದ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next