Advertisement

ಹೈಕಮಾಂಡ್ ‌ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧ: ಸಚಿವ ಗೋಪಾಲಯ್ಯ

01:03 PM Jul 22, 2021 | Team Udayavani |

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನಮ್ಮ ಧನಿ. ನಾವೆಲ್ಲ ವಲಸಿಗರಲ್ಲ ನಾವೆಲ್ಲ ಬಿಜೆಪಿಯವರು. ಹೈಕಮಾಂಡ್ ‌ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧ ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದರು.

Advertisement

ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಕ್ಯಾಬಿನೆಟ್ ಸಭೆಯಿದೆ. ನಾವೆಲ್ಲ ಸಿಎಂ ಜೊತೆ ಮಾತನಾಡುತ್ತೇವೆ. ನಾವೆಲ್ಲ ಅವರ ಜೊತೆ ಇದ್ದೇವೆ. ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬುತ್ತೇವೆ. ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಕರ್ನಾಟಕದಲ್ಲಿ ಸಿಎಂ ಬದಲಾವಣೆ… 2001ರ ಗುಜರಾತ್ ಇತಿಹಾಸ ಇಲ್ಲಿ ಮರುಕಳಿಸುತ್ತಾ?

ಹೈಕಮಾಂಡ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್ ನಿರ್ದಾರಕ್ಕೆ ನಾವು ಬದ್ಧ. ಹೈಕಮಾಂಡ್ ಭೇಟಿ ಮಾಡಲು ನಾವೆಲ್ಲ ಒಟ್ಟಿಗೆ ಕೂತು ಚರ್ಚೆ ಮಾಡಿ ತಿರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಯಾವುದೇ ತೊಂದರೆಯಿಲ್ಲ: ನಾರಾಯಣ ಗೌಡ

Advertisement

ಸಚಿವ ನಾರಾಯಣ ಗೌಡ ಮಾತನಾಡಿ, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಯಾವ ತರಹದ ಅಡಚಣೆಯೂ ಇಲ್ಲ. ಯಾವುದೇ ತೊಂದರೆಯಿಲ್ಲ. ಸಿಎಂ ಆಗಿದ್ದುಕೊಂಡೇ ಪಕ್ಷದ ಕೆಲಸ ಮಾಡಬಹುದು. ನಮ್ಮ ಹೈಕಮಾಂಡ್ ಯಡಿಯೂರಪ್ಪರವರೇ. ಅವರೇ ಸಿಎಂ ಆಗಿ ಮುಂದುವರಿಯಬೇಕೆಂದು ನಮ್ಮಆಸೆ. ಎಲ್ಲವೂ ಒಳ್ಳೆಯದಾಗಲಿದೆ ಎನ್ನುವ ವಿಶ್ವಾಸವಿದೆ ಎಂದರು.

ದೆಹಲಿಗೆ ಹೋಗುವ ಅಗತ್ಯ ಬಿದ್ದರೆ ಖಂಡಿತ ಹೋಗುತ್ತೇವೆ. ಆದರೆ ಸಿಎಂಗೆ ಹೇಳಿಯೇ ಹೋಗುತ್ತೇವೆ. ಸಿಎಂ‌ ಬದಲಾವಣೆಯಾದರೆ ನಮ್ಮ ಸಚಿವ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next