Advertisement

ಬಿಜೆಪಿ ನಮಗೆ ಎಲ್ಲವನ್ನೂ ಕೊಟ್ಟಿದೆ, ಬೇರೆ ಪಕ್ಷಕ್ಕೆ ನಾವ್ಯಾರೂ ಅರ್ಜಿ ಹಾಕಿಲ್ಲ: ಗೋಪಾಲಯ್ಯ

12:21 PM Jan 27, 2022 | Team Udayavani |

ಬೆಂಗಳೂರು: ಬಿಜೆಪಿಗೆ ವಲಸೆ ಬಂದ ಸಚಿವರು ಮತ್ತೆ ಬೇರೆ ಪಕ್ಷ ಸೇರುತ್ತಾರೆಂಬ ಚರ್ಚೆಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯೆ ನೀಡಿದ್ದು, “ಯಾರು ವದಂತಿ ‌ಹಬ್ಬಿಸುತ್ತಿದ್ದಾರೋ ಅವರನ್ನೇ ಕೇಳಿ” ಎಂದಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮಾತಿನಂತೆ ನಡೆದುಕೊಂಡಿದ್ದಾರೆ, ಸೋತವರಿಗೂ ಎಂಎಲ್ ಸಿ ಮಾಡಿ ಸ್ಥಾನಮಾನ ಕೊಟ್ಟಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:ಸಿದ್ದುಗೆ ಹೈಕಮಾಂಡ್ ಟಕ್ಕರ್ : ಮೇಲ್ಮನೆ ವಿಪಕ್ಷ ನಾಯಕತ್ವದ ಹಿಂದೆ ಲೆಕ್ಕಾಚಾರ

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಕೋವಿಡ್ ಮಧ್ಯೆಯೂ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ಬೇರೆ ಪಕ್ಷಕ್ಕೆ ಹೋಗುವ ಸಂದರ್ಭ ಬರುವುದಿಲ್ಲ. ನಾವ್ಯಾರು ಬೇರೆ ಪಕ್ಷಕ್ಕೆ ಅರ್ಜಿ ಹಾಕಿಲ್ಲ‌ ಎಂದು ಹೇಳಿದರು.

ಬೊಮ್ಮಾಯಿ ನೇತೃತ್ವದಲ್ಲೇ ಅಧಿಕಾರಕ್ಕೆ ‌ಬರುತ್ತೇವೆ. ನನಗೆ ಬಿಜೆಪಿ ಎಲ್ಲವನ್ನೂ ಕೊಟ್ಟಿದೆ. ಸಚಿವ ಸ್ಥಾನ ನೀಡಿದೆ, ಎರಡು ಜಿಲ್ಲೆ ಉಸ್ತುವಾರಿ ಕೊಟ್ಟಿದ್ದಾರೆ. ನಮಗೆ ಇನ್ನೇನು ಕೊಡೇಕು. ನಮ್ಮಲ್ಲಿ‌ಹೋಗುವವರು ಯಾರು ಇಲ್ಲ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಗೊತ್ತಿಲ್ಲ, ಅದರ ಬಗ್ಗೆ ನೀವು ರಮೇಶಣ್ಣನನ್ನೇ ಕೇಳಬೇಕು ಎಂದು ಸಚಿವ ಗೋಪಾಲಯ್ಯ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next