Advertisement

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ: ಮಾಜಿ ಕೇಂದ್ರ ಸಚಿವ ಮುನಿಯಪ್ಪ

01:44 PM Mar 03, 2022 | Team Udayavani |

ನೆಲಮಂಗಲ : ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಇದೆಲ್ಲಾ ಹೈ ಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.

Advertisement

ನೆಲಮಂಗಲ ಗಡಿ ಗ್ರಾಮವಾದ ಪಾಲನಹಳ್ಳಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ, ಮುಖ್ಯಮಂತ್ರಿ ಆಕಾಂಕ್ಷಿ ನಾನಲ್ಲ ಅದನ್ನೆಲ್ಲಾ ಹೈ ಕಮಾಂಡ್ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಬಳಿಕ ರಷ್ಯಾ-ಉಕ್ರೇನ್ ಯುದ್ದ ವಿಚಾರವಾಗಿ ಮಾತನಾಡಿದ ಅವರು ಉಕ್ರೇನ್ ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕೆಲಸವಾಗಬೇಕು , ವಿಶ್ವಸಂಸ್ಥೆ ಮುಂದೆನಿಂತು ಎರಡು ದೇಶಗಳ ನಡುವೆ ಶಾಂತಿ ಸಮನ್ವಯತೆಗೆ ಒತ್ತು ನೀಡಬೇಕು, ಅಲ್ಲದೆ ಈ ಎರಡು ದೇಶಗಳ ಅಕ್ಕ-ಪಕ್ಕದ ದೇಶಗಳು ಶಾಂತಿ ಸ್ಥಾಪಿಸಲು ಮುಂದಾಗಬೇಕು ಎಂದು ಹೇಳಿದರು.

ಇದನ್ನೂ ಓದಿ : ಕಂಡವರ ಜೇಬು ಭರ್ತಿ ಮಾಡುವ ‘ನೀಟ್’ ದಂಧೆಗೆ ಚರಮಗೀತೆ ಹಾಡುತ್ತೇವೆ: ಎಚ್ ಡಿ ಕುಮಾರಸ್ವಾಮಿ

Advertisement

Udayavani is now on Telegram. Click here to join our channel and stay updated with the latest news.

Next