Advertisement

ನನ್ನನ್ನು ಸೋಲಿಸಲು ಸಿದ್ದು ಪ್ರಯತ್ನಿಸಿರಲಿಲ್ಲ: ಮುನಿಯಪ್ಪ

10:20 PM Mar 06, 2023 | Team Udayavani |

ಕೋಲಾರ: ನನ್ನನ್ನೂ ಸೇರಿ ಮಲ್ಲಿಕಾರ್ಜುನ ಖರ್ಗೆ, ಡಾ| ಜಿ.ಪರಮೇಶ್ವರ್‌ ಮತ್ತಿತರರ ಯಾರನ್ನೂ ಕಳೆದ ಚುನಾವಣೆಗಳಲ್ಲಿ ಸೋಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಮುಂದಾಗಿರಲಿಲ್ಲ. ಅಂತಹ ವದಂತಿಗಳಿಗೆ ಕಿವಿಗೊಡಬೇಕಾಗಿಲ್ಲ ಎಂದು ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿದರು.

Advertisement

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯಲ್ಲಿ ನನಗೆ ಬಹಳಷ್ಟು ಕೆಲಸವಾಗಿದೆ. ಯಾವುದೇ ವಿಚಾರಕ್ಕೆ ಹೋದರೂ ಅವರು ನನಗೆ ಸ್ಪಂದಿಸುತ್ತಿದ್ದರು. ಈಗಲೂ ನಾನು ಅವರ ಪರವಾಗಿ ಇಲ್ಲಿ ಕೆಲಸ ಮಾಡುತ್ತಿದ್ದೇನೆ. ನಮ್ಮನ್ನು ಸೋಲಿಸಿದ್ದಾರೆ ಎನ್ನುವುದು ಸುಳ್ಳಿನ ಸಂಗತಿ ಎಂದು ಹೇಳಿದರು.

ಮತ್ತೊಮ್ಮೆ ಅವಕಾಶ ಬಂದಿದೆ
ರಾಜ್ಯದ ಮೊಟ್ಟಮೊದಲ ಮುಖ್ಯಮಂತ್ರಿ ಕೋಲಾರ ಜಿಲ್ಲೆಯವರಾಗಿದ್ದು, ಎರಡನೇ ಬಾರಿ ಕೋಲಾರ ಜಿಲ್ಲೆಗೆ ಮುಖ್ಯಮಂತ್ರಿ ಆಗುವ ಅವಕಾಶ ಬಂದಿದೆ. ಈ ನಿಟ್ಟಿನಲ್ಲಿ ಕೋಲಾರದಲ್ಲಿ ಗೆಲ್ಲಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುತ್ತೇವೆ. ಮಾಜಿ ಮುಖ್ಯಮಂತ್ರಿಯನ್ನು ಇಲ್ಲಿ ಗೆಲ್ಲಿಸಿಕೊಳ್ಳಲಾಗಿಲ್ಲವೆಂದರೆ ನಾವು ಇನ್ನೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next