Advertisement

‌ಕೋವಿಡ್ ನಿರ್ವಹಣೆ ವೆಚ್ಚ ಕುರಿತಂತೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು: ಕೆ.ಎಚ್. ಮುನಿಯಪ್ಪ

04:37 PM Aug 03, 2020 | keerthan |

ದಾವಣಗೆರೆ: ರಾಜ್ಯ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆ ನೆಪದಲ್ಲಿ ಎರಡು ಸಾವಿರ ಕೋಟಿಗೂ ಅಧಿಕ ಹಣ ಲೂಟಿ ಹೊಡೆದಿದೆ.‌ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಮೂರ್ತಿ ಅವರಿಂದ ನ್ಯಾಯಾಂಗ ತನಿಖೆ ನಡೆಸಬೇಕು. ‌ಕೋವಿಡ್-19 ನಿರ್ವಹಣೆ ವೆಚ್ಚ ಕುರಿತಂತೆ ಶ್ವೇತಪತ್ರ ಹೊರಡಿಸಬೇಕು.‌ ಇಲ್ಲದಿದ್ದಲ್ಲಿ ಬೂತ್ ಮಟ್ಟದಿಂದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಎಚ್ಚರಿಸಿದ್ದಾರೆ.‌

Advertisement

ಸ್ಪೀಕ್ ಆಫ್ ಕರ್ನಾಟಕ ಅಂಗವಾಗಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರದ ನೀತಿಗಳ ಪ್ರಶ್ನಿಸುವುದು ಪ್ರತಿಪಕ್ಷ ಗಳ ಕರ್ತವ್ಯ. ಹಾಗೆ ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿಯಿಂದ ಲೀಗಲ್ ನೊಟೀಸ್ ನೀಡಿರುವುದು ಖಂಡನೀಯ ಎಂದು ದೂರಿದರು.

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಆದಷ್ಟು ಬೇಗ ಈ ಸರ್ಕಾರ ತೊಲಗಲಿ ಎಂದರು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಎಸ್.‌ರಾಮಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next