Advertisement

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ: ಕೆ.ಎಚ್.ಮುನಿಯಪ್ಪ

10:02 AM Dec 12, 2019 | keerthan |

ಬೆಂಗಳೂರು: ಉಪಚುನಾವಣೆಯ ಸೋಲಿನ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಆ ಪದವಿಗೇರಲು ಹಲವರು ಲಾಬಿ ಮಾಡುತ್ತಿದ್ದು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಕೂಡಾ ಇಂಗಿತ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ, ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಪಕ್ಷದ ಗೌರವ, ವೈಯಕ್ತಿಕ ಗೌರವ ಹೆಚ್ಚಿಸಿಕೊಂಡಿದ್ದಾರೆ. ನನ್ನ ಬಗ್ಗೆ ಪಕ್ಷದ ಹೈ ಕಮಾಂಡ್ ಗೆ ಗೊತ್ತಿದೆ. ಹೀಗಾಗಿ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ನಾನು ಅದಕ್ಕೆ ಬದ್ದನಾಗಿರುತ್ತೆನೆ ಎಂದರು.

ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಾನು ನಿಭಾಯಿಸುತ್ತೇನೆ. ನನಗೆ ಸಾಕಷ್ಟು ಅನುಭವ ಇದೆ ಎಂದು ಹೇಳಿದರು.

ಉಪಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ ಕೆ.ಎಚ್.ಮುನಿಯಪ್ಪ,  ಉಪ ಚುನಾವಣೆಯಲ್ಲಿ ಹೆಚ್ಚು ಹಣ ಖರ್ಚು ಮಾಡಿ ಗೆದ್ದಿದ್ದಾರೆ. ನಾವು ಜನಾದೇಶಕ್ಕೆ ಬದ್ದವಾಗಿರಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next