Advertisement

ಡಿ.1ಕ್ಕೆ ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಕೆ.ನಾರಾಯಣ್ ನಾಮಪತ್ರ ಸಲ್ಲಿಕೆ

03:09 PM Nov 18, 2020 | sudhir |

ಬೆಂಗಳೂರು: ಇತ್ತೀಚಿಗೆ ಕೋವಿಡ್-19 ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಬುಧವಾರ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು, ಡಿಸೆಂಬರ್ 1ರಂದು ಮತದಾನ ನಡೆಯಲಿದೆ.

Advertisement

ರಾಜ್ಯ ಬಿಜೆಪಿ ಘಟಕವು ರಾಜ್ಯಸಭಾ ಚುನಾವಣೆಗೆ ಮೂವರ ಹೆಸರನ್ನು ಶಿಫಾರಸು ಮಾಡಿತ್ತು. ಅಶೋಕ್ ಗಸ್ತಿ ಪತ್ನಿ ಸುಮಾ ಗಸ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಶಂಕರಪ್ಪ, ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಹೆಸರನ್ನು ಸೂಚಿಸಿತ್ತು. ಆದರೆ ರಾಜ್ಯದ ಶಿಫಾರಸ್ಸನ್ನು ತಿರಸ್ಕರಿಸಿರುವ ಕೇಂದ್ರದ ನಾಯಕರು ಕೆ.ನಾರಾಯಣ್ ಅವರ ಹೆಸರನ್ನು ಸೂಚಿಸಿತ್ತು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಾಯಿತು.

ಇದನ್ನೂ ಓದಿ:ಕಲಬುರಗಿ-ದೆಹಲಿ ನಡುವೆ ವಿಮಾನಯಾನ ಆರಂಭ !

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next