Advertisement

ಸಾಕು ನಾಯಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿ ವಿಕೃತಿ ಮೆರೆದ ಸಹೋದರರು.. ವಿಡಿಯೋ ವೈರಲ್

10:56 AM Oct 05, 2022 | Team Udayavani |

ಕೆ.ಆರ್.ಪುರ : ಸಾಕುನಾಯಿಯನ್ನು ಹಗ್ಗದಿಂದ ಕಟ್ಟಿ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ವಿಕೃತಿ ಮೆರದಿರುವ ಅಮಾನುಷ ಘಟನೆ ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಟ್ಟರಹಳ್ಳಿ ಸಮೀಪದ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ, ಘಟನೆಗೆ ಸಂಬಂಧಿಸಿ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ.

Advertisement

ಸೋಮವಾರ ರಾತ್ರಿ ಸುಮಾರು 10:30 ಸಮಯದಲ್ಲಿ ಗದ್ದಿಗೆಪ್ಪ ಸಾಕಿದ ನಾಯಿ ಪಕ್ಕದ ಮನೆಯ ನಾಯಿಗೆ ಬೊಗಳಿ ಕಚ್ಚಿದೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಸಹೋದರರು ನಾಯಿಯನ್ನು ಹಗ್ಗದಿಂದ ಕಟ್ಟಿ ಹಾಕಿ ಮನಸ್ಸೋಯಿಚ್ಚೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಯುವಕರು ದೊಣೆಯಿಂದ ಹೊಡೆಯುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದ್ದಿಗೆಪ್ಪ ಎಂಬುವರಿಗೆ ಸೇರಿದ ನಾಯಿಗೆ ಹಲ್ಲೆ ಮಾಡಿ ವಿಕೃತ ಮೆರೆದ ಮೂರು ಜನ ಸಹೋದರರು. ಘಟನೆ ಸಂಬಂಧ ನಾಯಿ ಮಾಲೀಕ ಗದ್ದಿಗೆಪ್ಪನಿಂದ ಕೆಅರ್ ಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಾಯಿ ಮೇಲೆ ಹಲ್ಲೆ ನಡೆಸಿ ವಿಕೃತಿ ಮರೆದ ಲೋಹಿತ್, ರಾಹುಲ್, ರಂಜಿತ್ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ : ಕಂದಕಕ್ಕೆ ಉರುಳಿದ ಮದುವೆ ದಿಬ್ಬಣದ ಬಸ್, 25 ಮಂದಿ ಸಾವು, ಹಲವರಿಗೆ ಗಾಯ!

Advertisement
Advertisement

Udayavani is now on Telegram. Click here to join our channel and stay updated with the latest news.

Next