Advertisement

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

08:02 PM Sep 29, 2024 | Team Udayavani |

ಮೈಸೂರು: ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ ಎಂದು ಹಿರಿಯ ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌(K. S. Bhagawan) ಮತ್ತೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

Advertisement

ಮೈಸೂರಿನ ಟೌನ್‌ಹಾಲ್‌ನಲ್ಲಿ ರವಿವಾರ (ಸೆ29) ನಡೆದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಹಿಂದೂ ಧರ್ಮ ಅಂದರೆ ಅದು ಹಿಂದೂಗಳ ಧರ್ಮ ಅಲ್ಲ.ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ ಹೊರತು ಹೆಂಗಸರನ್ನು ಬ್ರಾಹ್ಮಣರು ಎನ್ನುವುದಿಲ್ಲ ಅವರನ್ನೂ ಶೂದ್ರರು ಎನ್ನುತ್ತಾರೆ.ದೇವಸ್ಥಾನ ಕಟ್ಟುವುದು ಶೂದ್ರರು. ಆದರೆ ದೇವಸ್ಥಾನದ ಒಳಗೆ ಇರುವವರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳುವುದಿಲ್ಲ. ಅದಕ್ಕಾಗಿ ನಾವು ಶೂದ್ರರಲ್ಲ ಎಂದು ಹೇಳಬೇಕು. ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಸಬೇಕು. ದೇವಸ್ಥಾಕ್ಕೆ ಹೋದರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕುತ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡುತ್ತಾರೆ ಅಷ್ಟೇ. ದೇವಸ್ಥಾನಕ್ಕೆ ಹೋದರೆ ಕಳೆದುಕೊಳ್ಳುತ್ತೇವೆ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು ಎಂದರು.

ಮನುಸ್ಮೃತಿಯಲ್ಲಿ ಶೂದ್ರ ಅಂದರೆ ಸೂ…ಹುಟ್ಟಿದವನು ಅಂತಾ ಇದೆ. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕೇ? ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ.ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ಏಕೆಂದರೆ ನಾನು ಹೇಳಿದ್ದು ನಂಬಿ ಎಂದು ಬುದ್ಧ ಹೇಳಿಲ್ಲ. ಆದ್ದರಿಂದ ನಾವು ಬುದ್ಧ ಧರ್ಮಕ್ಕೆ ಹೋಗಬೇಕು ಎಂದರು.

ಗುಲಾಮ, ಸೂ… ಮಗ ಎಂದು ಹೇಳುವ ಹಿಂದೂ ಧರ್ಮದಲ್ಲಿ ಇರಬಾರದು. ಸೂ ..ಮಗ ಎನ್ನುವ ಧರ್ಮಕ್ಕೆ ಎಡಗಾಲಿನ …ತಗೆದುಕೊಂಡು ಹೊಡೆಯಬೇಕು. ಹಿಂದೂ ಎಂದರೆ ಹೀನಾ ಎಂದು ಅರ್ಥ ಬರುತ್ತದೆ. ಆದ್ದರಿಂದ ಯಾರು ಹಿಂದೂ ಆಗಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next