Advertisement

ಲಾಕ್ ಡೌನ್ ಅಗತ್ಯವಿಲ್ಲ. ಆದರೆ ಸ್ವೇಚ್ಛಾಚಾರದ ಸಂಚಾರಕ್ಕೆ ಅವಕಾಶ ಇಲ್ಲ: ಸಚಿವ ಈಶ್ವರಪ್ಪ

01:34 PM Jul 03, 2020 | keerthan |

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚುತ್ತಿದೆ. ಸೋಂಕು ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ. ಸೋಂಕು ನಿಯಂತ್ರಣಕ್ಕೆ ಮತ್ತೊಂದು ಲಾಕ್ ಡೌನ್ ಅಗತ್ಯವಿಲ್ಲ. ಆದರೆ ಸ್ವೇಚ್ಛಾಚಾರದ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಹ ಸೋಂಕಿತರ ಸಂಖ್ತೆ ಹೆಚ್ಚುತ್ತಿದ್ದು, ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ. ಶೇ.95ಜನ ಮಾಸ್ಕ್ ಧರಿಸುತ್ತಿದ್ದಾರೆ. ಆದರೆ ಗುಂಪು ಸೇರುವುದು, ಸಾಮಾಜಿಕ ಅಂತರ ಪಾಲಿಸದೇ ಇರುವ ದೃಶ್ಯ ಸಾಮಾನ್ಯವಾಗಿದೆ.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳ ಹಿನ್ನಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆ ಕರೆಯಲಾಗಿದೆ. ಶನಿವಾರ ಬೆಳಗ್ಗೆ 10 ಗಂಟೆಗೆ 60 ಸಂಸ್ಥೆಗಳ ಪ್ರತಿನಿಧಿಗಳು ಬರಲಿದ್ದಾರೆ. ಲಾಕ್ ಡೌನ್ ಅಥವ ಇನ್ನಿತರ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಲಾಕ್ ಡೌನ್ ಬೇಕು- ಬೇಡಗಳ ಬಗ್ಗೆ ಜನರೇ ನಿರ್ಧರಿಸಲಿ ಎಂದರು.

ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶಕ್ಕೂ ಕೋವಿಡ್-19 ಸೋಂಕು ಹರಡುತ್ತಿರುವುದು ಆತಂಕಕಾರಿ. ಶಿವಮೊಗ್ಗದಲ್ಲಿ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ 150 ಬೆಡ್ ವ್ಯವಸ್ಥೆ ಇದೆ. ಹೆಚ್ಚುವರಿಯಾಗಿ ಗಾಜನೂರು ಮೊರಾರ್ಜಿ ಶಾಲೆಯಲ್ಲಿ 190 ಬೆಡ್, ಭದ್ರಾವತಿಯಲ್ಲಿ 50 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next