Advertisement

ಡಿಸಿಎಂ ಆದರೂ ಓಕೆ, ಸಚಿವ ಸ್ಥಾನವಾದರೂ ಓಕೆ; ಶೆಟ್ಟರ್ ರಂತೆ ನಿರ್ಧಾರ ನಾನು ಮಾಡಲ್ಲ:ಈಶ್ವರಪ್ಪ

01:19 PM Jul 29, 2021 | Team Udayavani |

ಶಿವಮೊಗ್ಗ: ಪಕ್ಷದ ನಾಯಕರು, ಹೈಕಮಾಂಡ್ ತೀರ್ಮಾನಕ್ಕೆ ನಾನು ತಯಾರಾಗಿದ್ದೇನೆ. ಜಗದೀಶ್ ಶೆಟ್ಟರ್ ಅವರು ತೆಗೆದುಕೊಂಡ ನಿರ್ಧಾರವನ್ನು ನಾನು ತೆಗೆದುಕೊಳ್ಳುವುದಿಲ್ಲ. ಉಪಮುಖ್ಯಮಂತ್ರಿಯಾಗಲೂ ತಯಾರಿದ್ದೇನೆ, ಸಚಿವನಾಗಲೂ ಕೂಡ ಸಿದ್ದರಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕೂಡ ಸಂಘಟಿಸಲು ಕೂಡ ನಾನು ತಯಾರಾಗಿದ್ದೇನೆ. ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಸಂಪೂರ್ಣ ತಯಾರಾಗಿದ್ದೇನೆ ಎಂದರು.

ಮುಂಬರುವ ಚುನಾವಣೆಗೆ ಈಗಿನಿಂದಲೇ ಪಕ್ಷ ಸಂಘಟನೆ ಮಾಡಬೇಕು. ಸಂಘಟನೆಯ ಶ್ರಮ ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next