Advertisement

ಯಾರೋ ಕಟ್ಟಿದ್ದ ಹುತ್ತದಲ್ಲಿ ಹಾವು ಸೇರಿಕೊಂಡಂತೆ ಕಾಂಗ್ರೆಸ್ ಸೇರಿದ ಸಿದ್ದರಾಮಯ್ಯ: ಈಶ್ವರಪ್ಪ

01:04 PM Dec 19, 2020 | keerthan |

ಶಿವಮೊಗ್ಗ: ಯಾರೋ ಕಟ್ಟಿದ್ದ ಹುತ್ತದಲ್ಲಿ ಹಾವು ಸೇರಿಕೊಂಡಂತೆ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಕೊಂಡಿದ್ದಾರೆ. ಸಿದ್ದರಾಮಯ್ಯ ನಂತಹ ಕುತಂತ್ರಿ ರಾಜಕಾರಣಿ ಕರ್ನಾಟಕದಲ್ಲಿ ಮತ್ತೊಬ್ಬರಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಟೀಕಿಸಿದ್ದಾರೆ.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮ ಪಕ್ಷದ ಒಳ ಸಂಚಿನಿಂದ ಸೋತಿದ್ದಾಗಿ ಹೇಳುತ್ತಾರೆ. ಅವರ ಪಕ್ಷದ ಹಲವು ಶಾಸಕರುಗಳು ಸಹ ಸೋತಿದ್ದಾರೆ. ಅದು ಯಾರ ಸಂಚಿನಿಂದ? ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ ಸೋತರು, ಅವರನ್ನು ಮನಸ್ಸಲ್ಲಿ ಇಟ್ಟು ಕೊಂಡು ಈ ಮಾತನ್ನು ಹೇಳಿದ್ದಾರೋ ಎಂದು ತಿರುಗೇಟು ನೀಡಿದರು.

ನನ್ನ ಸೋಲಿಗೆ ಒಂದು ಜಾತಿಯವರು ಕಾರಣ, ಪಕ್ಷ ತಾಯಿಯಿದ್ದಂತೆ ಎನ್ನುವ ಸಿದ್ದರಾಮಯ್ಯನವರಿಗೆ ಖರ್ಗೆ, ಪರಮೇಶ್ವರ್ ಸೋತಾಗ ತಾಯಿ ನೆನಪಾಗಲಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ:ಒಂದು ಪಕ್ಷ ಕಟ್ಟಿ 10 ಸ್ಥಾನ ಗೆದ್ದು ತೋರಿಸಿ: ಸಿದ್ದರಾಮಯ್ಯಗೆ ಸವಾಲು ಹಾಕಿದ ಕುಮಾರಸ್ವಾಮಿ

ಅವರ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಒಂದೇ ಒಂದು ಲೋಕಸಭಾ ಸ್ಥಾನ ಗೆದ್ದಿತು. ಅವರು ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಪಕ್ಷದ ನಿರ್ನಾಮ ಶುರುವಾಯಿತು. ಸಿದ್ದರಾಮಯ್ಯ ಪ್ರಬುದ್ಧ ರಾಜಕಾರಣಿ ತರಹ ವರ್ತಿಸುತ್ತಿಲ್ಲ. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತು ಹಾಕಿ ಎಂದು ಕೈ ಮುಖಂಡರಿಗೆ ಈಶ್ವರಪ್ಪ ಕರೆ ನೀಡಿದರು.

Advertisement

ಜಾತಿವಾರು ಸಮೀಕ್ಷೆ ಬಿಡುಗಡೆ ಮಾಡಲು ಜೆಡಿಎಸ್ ಬಿಜೆಪಿ ಷಡ್ಯಂತ್ರ ಹೂಡಿದೆ ಎನ್ನುತ್ತಿದ್ದಾರೆ. ಹಾಗಾದರೆ ಸಿದ್ದರಾಮಯ್ಯನವರೇ ತಾವೇ ಮುಖ್ಯಮಂತ್ರಿಯಾಗಿದ್ದಾಗ ಯಾಕೆ ಬಿಡುಗಡೆ ಮಾಡಲಿಲ್ಲ? ಸಿದ್ದರಾಮಯ್ಯ ಸಿಎಂ ಆಗಿದ್ದಾಗಲು ಬಿಡುಗಡೆ ಮಾಡಲಿಲ್ಲ, ಸಮ್ಮಿಶ್ರ ಸರ್ಕಾರ ಇದ್ದಾಗ್ಯೂ ಬಿಡುಗಡೆ ಮಾಡಲಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರ ಪಡೆದು ಪಕ್ಷದ ನಾಯಕರಿಗೆ-ಕಾರ್ಯಕರ್ತರಿಗೆ ಅವಮಾನ ಮಾಡುತ್ತಿದ್ದೀರಿ. ಇದು ಒಳ್ಳೆಯ ರಾಜಕಾರಣಿಯ ಲಕ್ಷಣ ಅಲ್ಲ ಎಂದು ಈಶ್ವರಪ್ಪ ಕಿವಿಮಾತು ಹೇಳಿದರು.

ಸಿದ್ದರಾಮಯ್ಯನವರು ಬೇರೆ ಪಕ್ಷ ಕಟ್ಟುತ್ತಾರೆ. ಇಲ್ಲವೇ ಯಾವುದಾದರೂ ಪಕ್ಷ ದ ಜೊತೆಗೆ ಹೋಗುತ್ತಾರೆ ಎಂದ ಈಶ್ವರಪ್ಪ, ರಾಷ್ಟ್ರದಲ್ಲಿ ಬಿಜೆಪಿ ಪಕ್ಷದ ಒಂದೇ ಗಟ್ಟಿಯಾಗಿ ಉಳಿಯುತ್ತದೆ. ಬಿಜೆಪಿ ನಾಯಕರನ್ನು ನಿರ್ಮಾಣ ಮಾಡುವ ಪಕ್ಷ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next