Advertisement

ಎಸ್‌ಟಿ ಹೋರಾಟಕ್ಕೆ ಸಿದ್ದರಾಮಯ್ಯ ಬರುವುದಾದರೆ ಬರಲಿ, ಗೊಂದಲ ಸೃಷ್ಟಿ ಬೇಡ: ಈಶ್ವರಪ್ಪ

01:01 PM Jan 17, 2021 | Team Udayavani |

ಬೆಂಗಳೂರು: ಎಸ್‌ಟಿ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತೋಷದಿಂದ ಬರುವುದಾದರೆ ಬರಲಿ. ಇಲ್ಲವಾದರೆ ಸುಮ್ಮನೆ ಇರಲಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

Advertisement

ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಮಾತನಾಡಿಕೊಳ್ಳಲಿ. ನಾನಂತೂ ಎಸ್‌ಟಿ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕಾಗಿನೆಲೆಯಿಂದ ಪಾದಯಾತ್ರೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸುಮಾರು ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದೆ.  ಈ ಸಮಾವೇಶಕ್ಕೆ ಸಿದ್ದರಾಮಯ್ಯ ಬರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದರು.

ಎಸ್‌ಟಿ ಹೋರಾಟದ ಹಿಂದೆ ಆರ್‌ಎಸ್‌ಎಸ್ ಇದೆ, ಯಾಕೆ ಪಾದಯಾತ್ರೆ ಎಂದೆಲ್ಲಾ ಹೇಳುವುದ್ಯಾಕೆ? ಆಸಕ್ತಿ ಇದ್ದರೆ ಬನ್ನಿ ಇಲ್ಲದಿದ್ದರೆ ಸುಮ್ಮನೆ ಇರಿ.ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡೋದು ಯಾಕೆ ಎಂದು ಸಚಿವರು ಪ್ರಶ್ನಿಸಿದರು.

ಇದನ್ನೂ ಓದಿ:ಪ್ರೀತಿಸಿ ಮದುವೆಯಾಗುವುದಿಲ್ಲವೆಂದ ಯುವಕ : ಪೊಲೀಸರ ಸಮ್ಮುಖದಲ್ಲೇ ಜೋಡಿಗೆ ವಿವಾಹ

Advertisement

ನಮಗೆ ಎಸ್‌ಟಿ ಮಾನ್ಯತೆ ಸಿಗುವ ವಿಶ್ವಾಸ ಇದೆ. ಇವರು ಮಾಡುತ್ತಿರುವುದು ಒಳ್ಳೆಯದಲ್ಲ ಎಂದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಯಾಕೆ ಮಾಡಲಿಲ್ಲ. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನಂತೂ ಹೋರಾಟದಲ್ಲಿ ಇದ್ದೇ ಇರುತ್ತೇನೆ ಎಂದರು.

ಕೋರ್ ಕಮಿಟಿಯಲ್ಲಿ ಅಮಿತ್ ಶಾ ಮಾರ್ಗದರ್ಶನ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಮುಂದಿನ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿದ್ದಾರೆ. ಸ್ವತಂತ್ರವಾಗಿ ಪೂರ್ಣ ಪ್ರಮಾಣದಲ್ಲಿ ಪಕ್ಷ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಮಾರ್ಗದರ್ಶನ ನೀಡಿದ್ದಾರೆ. ರಾಜ್ಯದಲ್ಲಿ ಪಕ್ಷದ ಸಂಘಟನೆ ನಡೆಯುತ್ತಿದೆ. ಈ ಹಿಂದೆ 25 ಎಂಪಿ ಕ್ಷೇತ್ರಗಳನ್ನ ಗೆದ್ದಿದ್ದೇವೆ. ಉಪಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲೂ ಗಮನಾರ್ಹ ಸಾಧನೆ ಮಾಡಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next