Advertisement

ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ: ಈಶ್ವರಪ್ಪ

10:22 AM Dec 15, 2019 | Team Udayavani |

ಶಿವಮೊಗ್ಗ: ಸಂಘಟನೆಯಿಂದಾಗಿ ಉಪ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗಳಿಸಿದ್ದೇವೆ.  ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ನಡೆದಾಗ ಜನರು ಬಿಜೆಪಿಗೆ ಪೂರ್ಣ ಬಹುಮತ ನೀಡಲಿಲ್ಲ. ಅದರೆ, ಬಹುಮತಕ್ಕೆ ಬಹು ಸಮೀಪ ತೆಗದುಕೊಂಡು ಹೋಗಿದ್ದರು. ಹೀಗಾಗಿ ರಾಜ್ಯದಲ್ಲಿ ಇಷ್ಟೆಲ್ಲಾ ರಾಜಕೀಯ ಬೆಳವಣಿಗೆಗಳಾದವು. ರಾಜ್ಯ ರಾಜಕಾರಣದಲ್ಲಿ ಹೇಗೆಲ್ಲಾ ಬದಲಾಗುತ್ತೋ ಗೊತ್ತಾಗಲ್ಲ ಎಂದರು.

ಸಿಎಂ ಯಡಿಯೂರಪ್ಪ ನವರ ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾತನಾಡಿದ ಅವರು, ಕಡಿಮೆ ಬಂದ ಕ್ಷೇತ್ರಗಳಿಗಾಗಿ ಅರ್ಧದಷ್ಟು ಕ್ಯಾಬಿನೆಟ್ ಸ್ಥಾನವನ್ನು ಮೀಸಲಿಡಬೇಕಾಯಿತು. ಬಿಜೆಪಿಯನ್ನು ಬೆಂಬಲಿಸಿ ಬಂದವರು ಇಂದು ಗೆಲುವು ಸಾಧಿಸಿದ್ದಾರೆ. ಅಸಮಾಧಾನಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next