Advertisement

ಸರ್ಕಾರ ಉಳಿಸಿದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರಲಿದೆ ನಮ್ಮ ಆಯ್ಕೆ: ಈಶ್ವರಪ್ಪ

04:04 PM Jun 13, 2020 | keerthan |

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಮಾಡುವಾಗ ಸರ್ಕಾರ ಉಳಿಸಿದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರುವ ರೀತಿ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಅನೇಕರು ಬಿಜೆಪಿಗೆ ಬಂದಿದ್ದಾರೆ. ಸರ್ಕಾರ ರಚಿಸಿ, ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಋಣವನ್ನು ನಾವು ಸಹ ತೀರಿಸಬೇಕಾಗಿದೆ. ಸುಮ್ಮನೆ ಕರೆದು ಮೋಸ ಮಾಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದರು.

ಹಲವು ವರ್ಷದಿಂದ ಪಕ್ಷ ಕಟ್ಟಿದ ಸಾಮಾನ್ಯ ಕಾರ್ಯಕರ್ತರು ಸಹ ಇದ್ದಾರೆ. ಪ್ರಸ್ತುತ 9 ಸ್ಥಾನಗಳಿದ್ದು, ಅವರಿಗೂ ಅವಕಾಶ ಕಲ್ಪಿಸಬೇಕಿದೆ. ಸೋಮವಾರ ಸಂಜೆ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆಯ್ಕೆ ಮಾಡಿ, ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಇಲ್ಲಿ ಹಳಬರು, ಹೊಸಬರು ಎಂಬ ವಿಚಾರವೇ ಬರಲ್ಲ. ಸರ್ಕಾರ ಉಳಿಸದವರಿಗೂ, ಸಾಮಾನ್ಯ ಕಾರ್ಯಕರ್ತರಿಗೂ ತೃಪ್ತಿ ತರೋ ಆಯ್ಕೆ ನಡೆಯಲಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವಿಚಾರವಾಗಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಬಳಿಕ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next