Advertisement

ಸಚಿವರಿಂದಲೇ ಕೋವಿಡ್ ನಿಯಮ ಉಲ್ಲಂಘನೆ: ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ

11:39 AM Jun 10, 2021 | Team Udayavani |

ಶಿವಮೊಗ್ಗ: ಕೋವಿಡ್ ಕಾರಣದಿಂದ ರಾಜ್ಯದಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರು ಭೇಟಿ ನೀಡುವಂತಿಲ್ಲ. ಅರ್ಚಕರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ನಿಯಮಗಳನ್ನು ಮಾಡಿರುವ ಸಿಎಂ ಯಡಿಯೂರಪ್ಪ ಸಂಪುಟದ ಸಚಿವರೇ ನಿಯಮ ಉಲ್ಲಂಘಿಸಿದ್ದಾರೆ.

Advertisement

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ನಿಯಮ ಉಲ್ಲಂಘಿಸಿದ ಸಚಿವರು.

ಇದನ್ನೂ ಓದಿ:ಮೆಹುಲ್ ಚೋಕ್ಸಿ ನಿಷೇಧಿತ ವಲಸಿಗ; ಡೊಮಿನಿಕಾ ಸರ್ಕಾರ ಘೋಷಣೆ; ಭಾರತಕ್ಕೆ ಮತ್ತಷ್ಟು ಬಲ

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಪತ್ನಿ, ಮಕ್ಕಳು, ಮೊಮ್ಮಕ್ಕಳೊಂದಿಗೆ ವಿನೋಬಾ ನಗರದ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿನೋಬಾ ನಗರದ ಶುಭಮಂಗಳ ಸಮುದಾಯ ಭವನದ ಆವರಣದಲ್ಲೇ ಈ ಗಣಪತಿ ದೇವಾಲಯವಿದೆ. ಇದೇ ಶುಭಮಂಗಳ ಸಮುದಾಯ ಭವನದಲ್ಲಿ ಕಳೆದ ಎರಡು ವಾರದಿಂದ ಕೋವಿಡ್ ಕೇರ್ ಸೆಂಟರ್ ಸಹ ನಡೆಸಲಾಗುತ್ತಿದೆ. ಆದರೂ ಸಚಿವರು ನಿಯಮಗಳನ್ನು ಗಾಳಿಗೆ ತೂರಿ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next