Advertisement

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ಆಳ್ವಾಸ್‌ ಚಾಂಪಿಯನ್‌

11:40 AM Mar 03, 2017 | Team Udayavani |

ಮೂಡಬಿದಿರೆ: ಬೆಂಗಳೂರು ಆನೇಕಲ್‌ ತಾಲೂಕಿನ ಚಂದ್ರಾಪುರ ಸೂರ್ಯನಗರದಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್‌ ತಂಡವು ಚಾಂಪಿಯನ್‌ ಆಗಿ ಮೂಡಿಬಂದಿದೆ.

Advertisement

ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್‌ ತಂಡವು 26-11 ಅಂಕಗಳ ಅಂತರದಲ್ಲಿ ಬಿವೈಎಸ್‌ ಬೆಂಗಳೂರು ತಂಡವನ್ನು ಸೋಲಿಸಿ ಚಾಂಪಿಯನ್‌ ಪ್ರಶಸ್ತಿ ಗೆದ್ದಿತು. ಮಹಿಳಾ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್‌ ತಂಡವು ಕೆಎಸ್‌ಪಿ ಬೆಂಗಳೂರು ತಂಡವನ್ನು 21-20 ಅಂಕಗಳ ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಗಳಿಸಿತು.

ಪುರುಷರ ವಿಭಾಗದಲ್ಲಿ ಆಳ್ವಾಸ್‌ನ ವಿಶ್ವರಾಜ್‌ ಮತ್ತು ಮಹಿಳಾ ವಿಭಾಗದಲ್ಲಿ ಸೌಮ್ಯಾ ಸರ್ವಾಂಗೀಣ ಆಟಗಾರ ಪ್ರಶಸ್ತಿಯನ್ನು ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next