Advertisement

Kadaba: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಪ್ರಕರಣ;ಆರೋಪಿಯ ಜಾಮೀನು ಅರ್ಜಿ ವಜಾ

09:22 PM Sep 04, 2024 | Team Udayavani |

ಕಡಬ: ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ನಡೆಸಿದ ಪ್ರಕರಣದ ಆರೋಪಿ ಕೇರಳ ಮೂಲದ ಮಲ್ಲಾಪುರದ ಅಬಿನ್‌ನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

Advertisement

ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆದ ವೇಳೆ ಪ್ರಾಸಿಕ್ಯೂಷನ್‌ ಪರ ವಕೀಲರು ವಿದ್ಯಾರ್ಥಿನಿಯರ ವೈದ್ಯಕೀಯ ದೃಢಪತ್ರ ಸಲ್ಲಿಸಿದ್ದು, ಅದರಲ್ಲಿ ಈಗಲೂ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡುಬಂದಿತ್ತು. ಹೀಗಾಗಿ ಆರೋಪಿಗೆ ಜಾಮೀನು ನೀಡಿದಲ್ಲಿ ಅವರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಹಾಗೆಯೇ ಪ್ರಕರಣದ ತೀವ್ರತೆಯನ್ನು ಗಮನಿಸಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಅಭಿಯೋಜನೆಯ ಪರ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಜಯಂತಿ ಕೆ. ಭಟ್‌ ವಾದಿಸಿದ್ದರು.

ಆರೋಪಿ ಅಬಿನ್‌ ಕಳೆದ ಮಾ. 4ರಂದು ಕಡಬದ ಸರಕಾರಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ನಡೆಸಿದ್ದ.

Advertisement

Udayavani is now on Telegram. Click here to join our channel and stay updated with the latest news.

Next