Advertisement

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

08:32 PM Oct 27, 2024 | Team Udayavani |

ಕಡಬ: ಇಲ್ಲಿನ ಐತ್ತೂರು ಗ್ರಾಮದ ಮಾಯಿಪಾಜೆ ಎಂಬಲ್ಲಿ ಶನಿವಾರ ಕುಮಾರಧಾರಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಪೊಲೀಸರು ಮರಳು ಸಮೇತ ವಾಹನವನ್ನು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿರುವ ಪೊಲೀಸರು ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನವನ್ನು ವಶಪಡಿಸಿಕೊಂಡು ಗಣಿ ಇಲಾಖೆಗೆ ಪ್ರಕರಣವನ್ನು ಹಸ್ತಾಂತರಿಸಿದ್ದಾರೆ. ಈ ಪಿಕಪ್‌ ವಾಹನ ಸ್ಥಳೀಯ ಅಜಯ್‌ ಎಂಬವರಿಗೆ ಸೇರಿದ್ದಾಗಿದೆ ಎಂದು ಕಡಬ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next