Advertisement

Kadaba: ಸಿ.ಎ. ಬ್ಯಾಂಕ್‌ ಭದ್ರತಾ ಸಿಬಂದಿ ಕರ್ತವ್ಯದ ವೇಳೆ ಕುಳಿತಲ್ಲೇ ಸಾವು

12:12 AM Aug 19, 2024 | Team Udayavani |

ಕಡಬ: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಯಿಲ ಶಾಖಾ ಕಚೇರಿಯ ಭದ್ರತಾ ಸಿಬಂದಿ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ಶಿವಪ್ಪ ಶೆಟ್ಟಿ ಅವರ ಪುತ್ರ ವರದರಾಜ ಶೆಟ್ಟಿ (45) ಅವರು ಕರ್ತವ್ಯನಿರತರಾಗಿದ್ದಾಗಲೇ ಮೃತಪಟ್ಟ ಘಟನೆ ಆ. 18ರಂದು ಸಂಭವಿಸಿದೆ.

Advertisement

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಆ. 17ರಂದು ರಾತ್ರಿ 8 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು ಮರುದಿನ ಬೆಳಗ್ಗೆ 6 ಗಂಟೆಯ ತನಕ ಕರ್ತವ್ಯ ನಿರ್ವಹಿಸಬೇಕಿತ್ತು. ಆದರೆ ಬೆಳಗ್ಗೆ ಸ್ಥಳೀಯರು ಬಂದು ನೋಡಿದಾಗ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕೂಡಲೇ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಕಡಬ ಸರಕಾರಿ ಸಮುದಾಯ ಆಸ್ಪತ್ರೆಗೆ ಕರೆತಂದು ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದನ್ನು ದೃಢಪಡಿಸಿದರು.

ವರದರಾಜ ಶೆಟ್ಟಿ ಅವರು ಯಾವುದೋ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿರಬಹುದು ಎಂದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮನೋಹರ ಪ್ರಕಾಶ್‌ ಡಿ. ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next