Advertisement

ಹೆತ್ತವರ ಯೋಗಕ್ಷೇಮ ವಿಚಾರಿಸಲು ಹೋದ ಮಗಳ ಮೇಲೆ ಚಿಕ್ಕಪ್ಪನಿಂದ ಹಲ್ಲೆ: ದೂರು ದಾಖಲು

12:17 AM Feb 22, 2023 | Team Udayavani |

ಕಡಬ: ಹೆತ್ತವರ ಯೋಗಕ್ಷೇಮ ವಿಚಾರಿಸಲು ಹೋದ ಮಗಳ ಮೇಲೆಯೇ ಚಿಕ್ಕಪ್ಪ ಹಲ್ಲೆಗೈದ ಘಟನೆ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈಯಲ್ಲಿ ಫೆ. 20ರಂದು ನಡೆದಿದೆ.

Advertisement

ಕಡಬ ಬೆಳಂದೂರಿನ ರಾಮಣ್ಣ ಗೌಡ ಅವರ ಪತ್ನಿ ಯಶೋದಾ ಅವರು ಬೆಳಂದೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು, ಫೆ. 20ರಂದು ಸಂಜೆ 5ರ ವೇಳೆಗೆ ಹೆತ್ತವರ ಯೋಗ ಕ್ಷೇಮ ವಿಚಾರಿಸಲು ಬೆಳಂದೂರಿನ ಅಮೈಯಲ್ಲಿರುವ ತವರು ಮನೆಗೆ ಬಂದಿದ್ದರು. ಆಗ ಅಲ್ಲಿಗೆ ಬಂದಿದ್ದ ಅವರ ಚಿಕ್ಕಪ್ಪ ಧರ್ಮಪಾಲ ಎಂಬಾತ ಅವಾಚ್ಯ ಶಬ್ದಗಳಿಂದ ಬೈದಾಗ, ಯಶೋದಾ ಅವರು ಯಾಕೆ ಬಯ್ಯುತ್ತೀರಿ ಎಂದು ಪ್ರಶ್ನಿಸಿದರು. ಆಗ ಧರ್ಮಪಾಲ ಅವಾಚ್ಯ ಶಬ್ದಗಳಿಂದ ಬೈದು, ಮರದ ಸಲಾಕೆಯಿಂದ ಯಶೋದಾ ಅವರ ಕೈಗೆ, ಬೆನ್ನಿನ ಹಿಂಬದಿಗೆ ಹೊಡೆದು ಗಾಯಗೊಳಿಸಿದ್ದಲ್ಲದೆ, ನಿಮ್ಮನ್ನು ಇಂದು ಕೊಲೆ ಮಾಡಿ ಹೋಗುತ್ತೇನೆಂದು ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ಯಶೋದಾ ತಿಳಿಸಿದ್ದಾರೆ.

ಗಾಯಗೊಂಡ ಯಶೋದಾ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆ ಮತ್ತು ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿದೂರು: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದೂರು ದಾಖಲಾಗಿದ್ದು ಧರ್ಮಪಾಲ ಅವರ ದೂರಿನಂತೆ ಅವರ ಅಣ್ಣ ಸುಂದರ ಗೌಡರ ಪತ್ನಿ, ಮಗಳು ಯಶೋದಾ ಅವರ ವಿರುದ್ಧ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next