Advertisement

ಕಡಬ ಆನೆ ದಾಳಿ ಪ್ರಕರಣ; ಘಟನಾ ಸ್ಥಳಕ್ಕೆ ಡಿಸಿ, ಡಿಎಫ್ಒ ಬರಲು ಸ್ಥಳೀಯರ ಪಟ್ಟು !

10:08 AM Feb 20, 2023 | Team Udayavani |

ಸುಬ್ರಹ್ಮಣ್ಯ: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಆನೆ ದಾಳಿಗೊಳಗಾಗಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಡಿಎಫ್ಒ ಬರಬೇಕೆಂದು ಸ್ಥಳೀಯರು ಪಟ್ಟು ಹಿಡಿದಿದ್ದು, ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪ ಇಂದು (ಫೆ.20) ಬೆಳಗ್ಗೆ ದಾಳಿಗೆ ಯುವತಿ ಹಾಗೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.

ಜಿಲ್ಲಾಧಿಕಾರಿ, ಡಿಎಫ್ಒ ಘಟನಾ ಸ್ಥಳಕ್ಕೆ ಬಾರದೇ ಮೃತ ದೇಹಗಳನ್ನು ತೆಗೆಯಲು ಬಿಡಲ್ಲ ಎಂದು ಒತ್ತಾಯಿಸಿರುವ ಸ್ಥಳೀಯರು, ಶಾಶ್ವತ ಪರಿಹಾರಕ್ಕೆ ಆಗ್ರಹಿಸುತ್ತಿದ್ದು, ಸಂಬಂಧಿಸಿದವರ ವಿರುದ್ಧ ಭಾರೀ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಆನೆ ದಾಳಿಗೆ ಇಂದು ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಎಂಬವರು ಮೃತಪಟ್ಟಿದ್ದಾರೆ‌.

ಕಡಬ ಪೊಲೀಸರು, ಅರಣ್ಯ ಇಲಾಖೆ ವಲಯ ವ್ಯಾಪ್ತಿಯ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next