Advertisement

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

11:32 PM Sep 25, 2023 | Team Udayavani |

ಕಡಬ: ಮರ್ದಾಳ ಮಸೀದಿಯ ಆವರಣದೊಳಗೆ ರವಿವಾರ ತಡರಾತ್ರಿ ನುಗ್ಗಿ ಜೈ ಶ್ರೀರಾಮ್‌ ಕೂಗಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

Advertisement

ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ಕೀರ್ತನ್‌ ಹಾಗೂ ಕೈಕಂಬ ನಡೊ¤àಟ ನಿವಾಸಿ ಸಚಿನ್‌ ಬಂಧಿತರು. ರಾತ್ರಿ ಬೈಕ್‌ನಲ್ಲಿ ಆಗಮಿಸಿದ ಆರೋಪಿಗಳು ಮಸೀದಿಯ ವರಾಂಡದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದರು. ಸದ್ದು ಕೇಳಿ ಮಸೀದಿಯಿಂದ ಹೊರಬಂದ ಧರ್ಮಗುರುಗಳನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ.

ಆರೋಪಿಗಳು ಬೈಕಿನಲ್ಲಿ ಮಸೀದಿಯ ಆವರಣದ ಒಳಗಡೆ ಬಂದು ತೆರಳುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಘಟನ ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next