Advertisement

Kadaba: ಆನೆ ದಾಳಿಗೊಳಗಾಗಿದ್ದ ವ್ಯಕ್ತಿ ಮೃತ್ಯು

12:50 PM Nov 07, 2023 | Team Udayavani |

ಕಡಬ: ತಾಲೂಕಿನ ಐತ್ತೂರು ಗ್ರಾಮ ಸುಳ್ಯ ಸಮೀಪ ಸೆ.28ರಂದು ಕಾಡಾನೆ  ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ನ.7ರಂದು ಮುಂಜಾನೆ ಮೃತಪಟ್ಟಿದ್ದಾರೆ.

Advertisement

ಐತ್ತೂರು ಗ್ರಾಮದ ಗೇರ್ತಿಲ‌ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಮೃತಪಟ್ಟವರು.

ಅವರು ಸೆ.28ರಂದು ಸಂಜೆ ಕೂಲಿ‌ ಕೆಲಸ ಬಿಟ್ಟು ಮನೆಯ ಕಡೆ ತೆರಳುತ್ತಿದ್ದ ಸಂದರ್ಭ ಗ್ರಾಮದ ನೆಲ್ಯಡ್ಕ ಶಾಲೆಗೆ ಹೊಂದಿಕೊಂಡಿರುವ ಕಾರ್ತಿಕೇಯ ಭಜನಾ ಮಂದಿರದ ಬಳಿ ಆನೆ ಹಠಾತ್ತಾಗಿ ಎದುರು ಬಂದು ಅವರನ್ನು‌ ಸೊಂಡಿಲಿನಿಂದ ಎತ್ತಿ ಬಿಸಾಕಿತ್ತು. ಈ ಪರಿಣಾಮವಾಗಿ ಚೋಮ‌ ಗಂಭೀರ ಗಾಯಗೊಂಡಿದ್ದು, ಅವರನ್ನು ಕೂಡಲೇ ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಬಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next