Advertisement

Kadaba ನೂಜಿಬಾಳ್ತಿಲ: ತೋಡಿಗೆ ಬಿದ್ದು ಯುವಕ ಸಾವು

11:29 PM Sep 05, 2024 | Team Udayavani |

ಕಡಬ: ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದ ಪೇರಡ್ಕದಲ್ಲಿ ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಅವರು ನೀರು ತುಂಬಿದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

Advertisement

ಕೂಲಿಕಾರ್ಮಿಕರಾಗಿದ್ದ ಅವರು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು.

ಸಂಜೆ ಸುಮಾರು ಒಂದು ಕಿ.ಮೀ. ದೂರದ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next