Advertisement

ಕಡಬ ಪೋಲೀಸರ ದಾಳಿ:ಅಕ್ರಮ ಪಿಸ್ತೂಲ್, ಸ್ಪೋಟಕ ಹೊಂದಿದ ವ್ಯಕ್ತಿಯ ಬಂಧನ

05:57 PM Aug 05, 2020 | sudhir |

ಕಡಬ : ಯಾವುದೇ ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್. ಐ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿ ಬಂಧಿಸಿದ ಘಟನೆ ಕಡಬ ಗ್ರಾಮದ ಪಾಲೋಳಿ ಎಂಬಲ್ಲಿ ಬುಧವಾರ ನಡೆದಿದೆ.

Advertisement

ಕಡಬ ತಾಲೂಕು ಕಡಬ ಗ್ರಾಮದ ಪಾಲೋಳಿ ಎಂಬಲ್ಲಿ ಜನಾರ್ಧನ್ ಗೌಡ ಬಂಧಿತ ಆರೋಪಿ. ಈತನ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು 02 ನಕಲಿ ಪಿಸ್ತೂಲ್ ಮತ್ತು 02 ಖಾಲಿ ತೋಟೆ ಹಾಗೂ ರಂಜಕ, ಪೊಟ್ಯಾಶಿಯಂ ಕೇಪುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ರೀತಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ವಶದಲ್ಲಿ ಇಟ್ಟುಕೊಳ್ಳುವುದು ಕಾನೂನು ಬಾಹಿರ ಅಪರಾಧವಾಗಿದ್ದು ಈತನನ್ನು ಪೊಲೀಸರು ದಸ್ತಗಿರಿ ಮಾಡಿ ವಶಕ್ಕೆ ಪಡೆದುಕೊಂಡು ಆತನ ಮೇಲೆ ಶಸ್ತ್ರಾಸ್ತಗಳ ಅಧೀನಿಯಮ ಹಾಗೂ ಸ್ಪೋಟಕಗಳ ಅಕ್ರಮ ಸಂಗ್ರಹಣೆಯ ಅಧಿನಿಯಮದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ ಪೊಲೀಸ್ ಠಾಣಾ ಉಪನಿರೀಕ್ಷಕರಾದ ರುಕ್ಮ ನಾಯ್ಕ್ ತಂಡ ಕಾರ್ಯಾಚರಣೆ ನಡೆಸಿದ್ದು. ಕಾರ್ಯಾಚರಣೆಯಲ್ಲಿ ಎ.ಎಸ್.ಐ ಚಿದಾನಂದ ರೈ, ಎಚ್.ಸಿ ಸ್ಕರಿಯ, ಪಿ.ಸಿ. ಭವಿತ್ ರೈ, ಶ್ರೀಶೈಲ್, ಮಹೇಶ್ ,ಜೀಪು ಚಾಲಕ ಕನಕರಾಜ್ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next