Advertisement

Kadaba: ಪ್ರಾಣಿ ಬೇಟೆ ಮೂವರ ಬಂಧನ

09:53 PM Aug 22, 2023 | Team Udayavani |

ಕಡಬ: ಕಾಡು ಪ್ರಾಣಿಗಳ ಬೇಟೆಯಾಡಿದ ಮೂವರು ಆರೋಪಿಗಳನ್ನು ಕಡಬ ಪೋಲಿಸರು ಬಂಧಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕುಂತೂರು ಬಳಿ ಮಂಗಳವಾರ ಸಂಭವಿಸಿದೆ.

Advertisement

ಬಲ್ಯ ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಆರೋಪಿಗಳು ಮುಂಜಾವಿನ ವೇಳೆ ಮನೆಯ ಕಡೆ ತೆರಳುತ್ತಿದ್ದಾಗ ಗುಸ್ತು ತಿರುಗುತ್ತಿದ್ದ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ನೆಲ್ಯಾಡಿ ಮೂಲದ ಬಿನು, ದಿನೇಶ್‌ ಹಾಗೂ ನವೀನ್‌ ಬಂಧಿತ ಆರೋಪಿಗಳು. ಕಡಬ ಎಸ್‌ಐ ಆಂಜನೇಯ ರೆಡ್ಡಿ ಹಾಗೂ ಸಿಬಂದಿ ಗಸ್ತು ತಿರುಗಿಕೊಂಡು ಕುಂತೂರು ಬಳಿ ಬಂದಾಗ ಒಂದು ಇನ್ನೋವಾ ಕಾರು ಅನುಮಾನಾಸ್ಪದವಾಗಿ ಸಾಗುತ್ತಿರುವುದು ಕಂಡು ಬಂದಿದೆ. ಕೂಡಲೇ ಆ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಬೇಟೆಯಾಡಿದ ಒಂದು ಮುಳ್ಳು ಹಂದಿ, ಎರಡು ಬರಿಂಕ, ಒಂದು ಬೆರು ಎನ್ನುವ ಪ್ರಾಣಿಗಳು ಪತ್ತೆಯಾಗಿದೆ. ಜತೆಗೆ ಒಂದು ಕೋವಿ ಸಿಕ್ಕಿದೆ. ಮೂವರನ್ನು ಬಂಧಿಸಿರುವ ಪೋಲೀಸರು, ಬೇಟೆಯಾಡಿದ ಪ್ರಾಣಿ, ಕೋವಿ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸಂಬಂಧಪಟ್ಟ ಇಲಾಖೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲು ಆದೇಶಿಸಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next