Advertisement

ಕಡಬ:ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು 

04:27 PM Sep 05, 2017 | |

ಕಡಬ:ಇಲ್ಲಿನ ಶಾಂತಿಮೊಗರು  ದೇವಸ್ಥಾನದ ಬಳಿ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕಿಳಿದ ಯುವಕರಿಬ್ಬರು ನೀರುಪಾಲಾದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ನಡೆದಿದೆ.

Advertisement

ಶಾಂತಿಮೊಗರು ದೇವಸ್ಥಾನಕ್ಕೆಂದು ಮೂವರು ಯುವಕರು ತೆರಳಿದ್ದು, ಅದರಲ್ಲಿ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಹರಿ ಮತ್ತು  ಸತ್ಯ ಸ್ನಾನ ಮಾಡಲೆಂದು ನೀರಿಗಿಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ ಇವರಿಬ್ಬರು ನೀರುಪಾಲಾಗಿದ್ದು, ನದಿಯಲ್ಲಿ ಇಬ್ಬರ ಶವಗಳಿಗಾಗಿ  ಶೋಧ ಕಾರ್ಯ ಮುಂದುವರಿಸಿದೆ.

ಕಡಬ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next