Advertisement

ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮೀಜಿ ನಿಧನ: ಸಿಎಂ ಬಿಎಸ್ ವೈ ಸಂತಾಪ

11:37 AM Mar 16, 2021 | Team Udayavani |

ಶಿವಮೊಗ್ಗ: ಜಿಲ್ಲೆತಯ ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗ ಮಂದಿರದ ರೇವಣಸಿದ್ಧ ಮಹಾಸ್ವಾಮೀಜಿ ಇಂದು ನಿಧನ ಹೊಂದಿದರು. ಸ್ವಾಮೀಜಿ ನಿಧನಕ್ಕೆ ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

Advertisement

ಬಿಜಾಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಜನಿಸಿದ್ದ ಸ್ವಾಮೀಜಿ, ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ಸಾಧಿಸಿದ್ದರು. ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಮಾರ್ಗದರ್ಶಕರಾಗಿದ್ದ ಇವರು ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದರು.

ಇದನ್ನೂ ಓದಿ:ಮಾಗಡಿ: ಮಹದೇಶ್ವರಸ್ವಾಮಿ ಅಗ್ನಿಕೊಂಡೋತ್ಸವ

ಎಲ್ಲಾ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಸ್ವಾಮೀಜಿ ಅವರ ನಿಧನದಿಂದ ನಾವು ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ: ಮುದ್ರಾಡಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ, ಹೊತ್ತಿ ಉರಿದ ಕಾರು! ಪ್ರಯಾಣಿಕರು ಪಾರು

Advertisement

Udayavani is now on Telegram. Click here to join our channel and stay updated with the latest news.

Next