Advertisement

ಕಡಲ ತೀರದಲ್ಲಿ ಹಾಡು ಹಬ್ಬ

02:35 PM Feb 08, 2023 | Team Udayavani |

“ಕಡಲ ತೀರ’- ಹೀಗೊಂದು ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಈಗಬಿಡುಗಡೆ ಹಂತಕ್ಕೆ ಬಂದಿದೆ. ಇತ್ತೀಚೆಗೆ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ.

Advertisement

ವಿ.ನಾಗೇಂದ್ರಪ್ರಸಾದ್‌ ಬರೆದಿರುವ”ಸಮಯವೇ..’ ಎಂಬ ಹಾಡು ಇತ್ತೀಚೆಗೆಬಿಡುಗಡೆಯಾಗಿದ್ದು, ವಿಜಯ್‌ ಪ್ರಕಾಶ್‌ಅವರ ಧ್ವನಿಯಲ್ಲಿ ಮೂಡಿಬಂದಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪನ್ನಗ ಸೋಮಶೇಖರ್‌, “ಕಡಲ ತೀರದ ಭಾರ್ಗವ ಎಂದು ಹಿರಿಯ ಸಾಹಿತಿಶಿವರಾಮ ಕಾರಂತರನ್ನು ಕರೆಯುತ್ತಾರೆ.ಅದರೆ ನಮ್ಮ ಚಿತ್ರದ ಕಥೆ ಅವರ ಬಗ್ಗೆ ಅಲ್ಲ.ಚಿತ್ರದಲ್ಲಿ ನಾಯಕನ ಹೆಸರು ಭಾರ್ಗವ ಎಂದು. ನಾನು ಕಡಲತೀರವನ್ನುಮನುಷ್ಯನ ಮನಸ್ಸಿಗೆ ಹೋಲಿಸುತ್ತೇನೆ. ಪಟೇಲ್‌ ವರುಣ್‌ ರಾಜು ಭಾರ್ಗವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭರತ್‌ಗೌಡ ನಾಯಕನಾಗಿ, ಶೃತಿ ಪ್ರಕಾಶ್‌ ನಾಯಕಿಯಾಗಿ ನಟಿಸಿದ್ದಾರೆ. ಅನಿಲ್‌ ಸಿ.ಜೆಸಂಗೀತ ನೀಡಿರುವ ಆರು ಹಾಡುಗಳ ಪೈಕಿ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿ, ಜನಪ್ರಿಯವಾಗಿದೆ. ಫೆಬ್ರವರಿ 13 ಟ್ರೇಲರ್‌ ಬರಲಿದೆ. ಅದೇ ದಿವಸ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ’ ಎಂದರು.

ಚಿತ್ರದ ನಾಯಕ ಕಂ ನಿರ್ಮಾಪಕ ಭರತ್‌ ಗೌಡಅವರಿಗೆ ಈ ಸಿನಿಮಾ ಮಾಡಿದ್ದು ಒಂದು ಒಳ್ಳೆಯ ಅನುಭವವಂತೆ. “ಮದವೆ ಮಾಡಿ ನೋಡು. ಮನೆ ಕಟ್ಟಿ ನೋಡು ಎಂದುಹೇಳುತ್ತಾರೆ. ಹಾಗೆ ಸಿನಿಮಾ ಮಾಡುವುದು ಸಹ ಅಷ್ಟು ಸುಲಭವಲ್ಲ. ನಿರ್ದೇಶಕರುಹೇಳಿದ ಕಥೆ ಇಷ್ಟವಾಗಿ, ನಾನು ಹಾಗೂ ವರುಣ್‌ ಪಟೇಲ್‌ ರಾಜು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಜೊತೆಗೆನಾಯಕನಾಗೂ ಅಭಿನಯಿಸಿದ್ದೇನೆ.ನಮ್ಮಂತಹ ಹೊಸಬರಿಗೆ ಯಾರಾದರೂ ಸ್ಟಾರ್‌ ನಟರು ಪ್ರೋತ್ಸಾಹಿಸಿದರೆ ಸಹಾಯವಾಗುತ್ತದೆ’ ಎನ್ನುವುದು ಭರತ್‌ ಗೌಡ ಮಾತು.

“ನಮ್ಮ ಚಿತ್ರವನ್ನು ನೋಡಲು ಚಿತ್ರಮಂದಿರಕ್ಕೆ ಜನರು ಬರುವ ಪ್ರಯತ್ನ ಮಾಡಬೇಕು. ಆ ನಿಟ್ಟಿನಲ್ಲಿ ಪ್ರಚಾರ ಆರಂಭಿಸಿದ್ದೇವೆ. ಉತ್ತಮ ಕಂಟೆಂಟ್‌ವುಳ್ಳ ಚಿತ್ರ ಮಾಡಿದ್ದೇವೆ’ ಎನ್ನುತ್ತಾರೆ ನಿರ್ಮಾಪಕ ಹಾಗೂ ಭಾರ್ಗವ ಪಾತ್ರಧಾರಿ ಪಟೇಲ್‌ವರುಣ್‌ ರಾಜು. ಚಿತ್ರದ ಹಾಡುಗಳ ಬಗ್ಗೆಅನಿಲ್‌ ಸಿ ಜೆ ಮಾಹಿತಿ ನೀಡಿದರು. ಅನೇಕಕಲಾವಿದರು ಹಾಗೂ ತಂತ್ರಜ್ಞರು ಕಡಲತೀರದ ಭಾರ್ಗವ ಸಿನಿಮಾ ಬಗ್ಗೆ ಮಾತನಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next