Advertisement

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

05:17 PM May 22, 2022 | Team Udayavani |

ಮಲ್ಪೆ: ಶನಿವಾರ ಸಂಜೆ ಮನೆಯಿಂದ ಆಟವಾಡಲು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪಿದ ಘಟನೆ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ.

Advertisement

ಕಡೆಕಾರು ನಿವಾಸಿ ಗಿರೀಶ್‌ ಉಪಾಧ್ಯಾಯ ಎಂಬವರ ಪುತ್ರ ರಾಘವ (8) ಮೃತಪಟ್ಟ ಬಾಲಕ. ಈತ ಕಿದಿಯೂರು ಆಂಗ್ಲಮಾದ್ಯಮ ಶಾಲೆಯ 3ನೇ ತರಗತಿಯ ವಿದ್ಯಾರ್ಥಿ.

ಶನಿವಾರ ಸಂಜೆ ಮನೆ ಬಳಿ ಆಟವಾಡಲು ಜಾರು ಬಂಡಿಗೆ ಹೋಗಿದ್ದ ಈತ ಕೈಕಾಲು ತೊಳೆಯಲು ಕೆರೆಗೆ ಇಳಿದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿದ್ದು ಈಜಾಡಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ:ಪ್ರವಾಹ ತಡೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಶನಿವಾರ ರಾತ್ರಿ 12 ಗಂಟೆಯವರೆಗೂ ಹುಡುಕಾಟ ನಡೆಸಿದರೂ ಪತ್ತೆಯಾಗದ ಕಾರಣ ಬೆಳಗ್ಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ನೀರಿನಾಳದಲ್ಲಿರುವ ಬಾಲಕನ ಮೃತದೇಹವನ್ನು ಪತ್ತೆ ಹಚ್ಚಿ ಮೇಲೆತ್ತಿದ್ದಾರೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next