Advertisement

Heavy Rain; ಕದ್ರಾ ಜಲಾಶಯದಿಂದ 51000 ಕ್ಯೂಸೆಕ್ಸ್ ನೀರು ಹೊರಗೆ

08:12 PM Jul 22, 2023 | Team Udayavani |

ಕಾರವಾರ : ಕದ್ರಾ, ಕೊಡಸಳ್ಳಿ ಜಲಾಶಯ ಹಿನ್ನೀರಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕದ್ರಾ ಜಲಾಶಯದ ಆರು ಕ್ರಸ್ಟ್ ಗೇಟ್ ತೆರೆದು ನದಿಗೆ ನೀರು ಹೊರ ಬಿಡಲಾಗಿದೆ.

Advertisement

ಶನಿವಾರ ಬೆಳಿಗ್ಗೆ ನೀರು ಹೊರ ಬಿಡುವ ಪ್ರಮಾಣ 50 ಸಾವಿರ ಕ್ಯೂಸೆಕ್ಸ್ ತಲುಪಿತ್ತು. ಮಳೆ ಸ್ವಲ್ಪ ತಗ್ಗಿದ‌ ಕಾರಣ ಈಗ ಅಪರಾಹ್ನದ ವೇಳೆಗೆ 51000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯಕ್ಕೆ 33115.0 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.‌ಕೊಡಸಳ್ಳಿ ಡ್ಯಾಂಗೆ 14490.0 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕೊಡಸಳ್ಳಿಯಲ್ಲಿ 154.2 ಮಿಲಿ ಮೀಟರ್ ಮಳೆಯಾಗಿದೆ. ಕದ್ರಾದಲ್ಲಿ ಇಂದು 103.7 ಮಿಲಿ ಮೀಟರ್ ಮಳೆಯಾಗಿದೆ. ಮಳೆ ಸತತವಾಗಿ ಬೀಳುತ್ತಿದೆ. ಸುಫಾ ಜಲಾಶಯಕ್ಕೆ 42911.304 ಕ್ಯೂಸೆಕ್ಸ್ ನೀರು ಒಳ ಹರಿವು ಇದೆ. ಜಲಾಶಯ 534 ಅಡಿ ಭರ್ತಿಯಾಗಿದೆ. ಜಲಾಶಯ ತುಂಬಲು 30 ಅಡಿ ಬಾಕಿ ಇದೆ. ದಾಂಡೇಲಿ ,ಜೊಯಿಡಾ , ಯಲ್ಲಾಪುರ ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರಕನ್ನಡ ಜಿಲ್ಲೆಯ ಕದ್ರಾ ಜಲಾಶಯ ಭರ್ತಿಯಾಗಿದೆ. ಜಿಲ್ಲಾಡಳಿತ ನಿಗದಿ ಮಾಡಿರುವ ಗಡಿ ತಲುಪಿದ ಕಾರಣ ಜಲಾಶಯದಿಂದ ನಿನ್ನೆ ರಾತ್ರಿ ಯಿಂದಲೇ ನೀರನ್ನು ನದಿಗೆ ಬಿಡಲಾಗಿದೆ .ನದಿ ದಂಡೆಯ ಜನರಿಗೆ ಸುರಕ್ಷತೆಗೆ ಕಾಳಜಿ ವಹಿಸಲಾಗುತ್ತಿದೆ.

ಇನ್ನೂ ಜಲಾಶಯದಿಂದ ನೀರನ್ನ ಹೊರ ಬಿಟ್ಟ ಕಾರಣ ಕದ್ರಾ ಜಲಾಶಯ ವ್ಯಾಪ್ತಿಯ ನಿವಾಸಿಗಳು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಮಳೆ‌ ಪ್ರಮಾಣ ಇನ್ನೂ ಹೆಚ್ಚುತ್ತಾ ಹೋದಲ್ಲಿ ಇನ್ನಷ್ಟು ಗೇಟ್ ಗಳ‌ ಮೂಲಕ ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಘಟ್ಟದ ತಾಲೂಕಿನಲ್ಲಿ ಮಳೆ ಬೀಳುತ್ತಲೇ ಇದೆ. ಜಿಲ್ಲೆಯ ನದಿಗಳು ತುಂಬಿ ಹರಿದಿವೆ. ಆದರೆ ಗ್ರಾಮಗಳನ್ನು ಸ್ಥಳಾಂತರಿಸುವ ಸನ್ನಿವೇಶ ಸೃಷ್ಟಿಯಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next