Advertisement

ಕದ್ರಿ ದೇವಸ್ಥಾನ ಬ್ರಹ್ಮಕಲಶಾಭಿಷೇಕಕ್ಕೆ ಸಿದ್ಧ

11:16 PM Apr 30, 2019 | sudhir |

ಮಹಾನಗರ: ಪುರಾಣ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮೇ 2ರಿಂದ ಮೇ 10ರವರೆಗೆ ಅಷ್ಟೋತ್ತರ ಸಹಸ್ರ ಬ್ರಹ್ಮಕಲಶಾಭಿಷೇಕ, ಮಹಾದಂಡರುದ್ರಾಭಿಷೇಕ ಹಾಗೂ ಮಹಾರುದ್ರಯಾಗ ಆಯೋಜನೆಯ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಪುಣ್ಯ ಕಾರ್ಯದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರವನ್ನು ವಿಶೇಷ ಹೂವಿನ ಅಲಂಕಾರ ಹಾಗೂ ವಿದ್ಯುದೀಪಗಳಿಂದ ಶೃಂಗರಿಸಲಾಗಿದೆ.

Advertisement

ಕದ್ರಿ ಮಠಾಧೀಶರಾದ ಶ್ರೀ ರಾಜಾನಿರ್ಮಲನಾಥ್‌ ಜೀ ಉಪಸ್ಥಿತಿಯಲ್ಲಿ ದೇರೆಬೈಲು ಬ್ರಹ್ಮಶ್ರೀ ಶ್ರೀ ವಿಠಲದಾಸ್‌ ತಂತ್ರಿವರೇಣ್ಯರ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ.

ಬ್ರಹ್ಮಕಶಾಭಿಷೇಕದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಹೊರಭಾಗದಲ್ಲಿ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್‌ಗೆ ಕದ್ರಿ ಕ್ರೀಡಾಂಗಣ ಹಾಗೂ ಇತರ ಮೂರು ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ದೇವಾಲಯವನ್ನು ವಿದ್ಯುದ್ದೀಪಾಲಂಕಾರದಿಂದ ಅಲಂಕರಿಸಲಾಗಿದೆ.

ದೇವಾಲಯದ ಬಲಭಾಗದಲ್ಲಿ ಬ್ರಹ್ಮಕಲಶ ಮಂಟಪ ರಚನೆ ನಡೆಯುತ್ತಿದ್ದು, ಸುತ್ತಮುತ್ತ ಚಪ್ಪರ ಹಾಕಲಾಗಿದೆ. ದೇವಾಲಯದ ಬಲಭಾಗದಲ್ಲಿ ಸಾಂಸ್ಕೃತಿಕ ವೇದಿಕೆ ನಿರ್ಮಾಣ ಮಾಡಲಾಗಿದ್ದು ಏಕಕಾಲಕ್ಕೆ 3 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ.

ವಿವಿಧ ಕಾಮಗಾರಿ ಪೂರ್ಣ
ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಸುತ್ತುಪೌಳಿ ಪುನರ್‌ ನಿರ್ಮಾಣ ಕಾಮಗಾರಿ, ಶನಿಪೂಜೆ, ಸತ್ಯನಾರಾಯಣ ಪೂಜಾ ಹಾಲ್‌, ಮಂಜುನಾಥ ದೇವಾಲಯದ ಒಳಾಂಗಣಕ್ಕೆ ಗ್ರಾನೈಟ್‌ ಹಾಸುವ ಕಾಮಗಾರಿ ನಡೆದಿದೆ. ಮೇ 2ರಿಂದ 11ರವರೆಗೆ ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳು ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next