Advertisement

Road Mishap: ಕುಡುಮಲ್ಲಿಗೆ ಬಳಿ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಪಲ್ಟಿ, ಪಾರಾದ ಚಾಲಕ

05:24 PM Jan 26, 2024 | sudhir |

ತೀರ್ಥಹಳ್ಳಿ : ಗ್ಯಾಸ್ ಹಂಡೆ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕುಡುಮಲ್ಲಿಗೆ ತಿರುವಿನಲ್ಲಿ ಗದ್ದೆಗೆ ಪಲ್ಟಿ ಹೊಡೆದಿದೆ.

Advertisement

ಶುಕ್ರವಾರ ಮಧ್ಯಾಹ್ನ 1:40 ರ ವೇಳೆಯಲ್ಲಿ ಈ ಘಟನೆ ಜರುಗಿದ್ದು ಶಿವಮೊಗ್ಗದಿಂದ ಮಂಗಳೂರಿಗೆ ಲಾರಿ ಹೋಗುತ್ತಿತ್ತು ಎನ್ನಲಾಗಿದೆ. ಕುಡುಮಲ್ಲಿಗೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಗದ್ದೆಗೆ ಇಳಿದಿದೆ. ಚಾಲಕ ಹಾರಿಕೊಂಡಿದ್ದು ಆತನಿಗೆ ಯಾವುದೇ ತೊಂದರೆ ಆಗಿಲ್ಲ.

ಗ್ಯಾಸ್ ಹಂಡೆಗಳು ಕೂಡ ಲಾರಿಯಿಂದ ಹೊರಬಿದ್ದಿದ್ದು ಯಾವುದೇ ಅವಘಡ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka; ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ: 32 ಶಾಸಕರಿಗೆ ಅಧ್ಯಕ್ಷ ಸ್ಥಾನ

Advertisement

Udayavani is now on Telegram. Click here to join our channel and stay updated with the latest news.

Next