Advertisement

Kadur: ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಮೇಲೆ ಎಫ್‌ಐಆರ್ ದಾಖಲು

09:29 PM Aug 12, 2023 | Team Udayavani |

ಕಡೂರು : ತಾಲ್ಲೂಕಿನ ಬೀರೂರು ಹೋಬಳಿಯ ಉಳಿನಾಗರು ಗ್ರಾಮದ ಸರ್ವೆ ನಂ. 43ರಲ್ಲಿ 5.04 ಎಕರೆ ಸರಕಾರಿ ಬೀಳು ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಸೇರಿದಂತೆ ಮತ್ತಿಬ್ಬರ ವಿರುದ್ಧ ಶನಿವಾರ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ತರೀಕೆರೆ ಉಪವಿಭಾಗಾಧಿಕಾರಿ ಡಾ.ಕೆ.ಜೆ. ಕಾಂತರಾಜ್ ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ದೂರು ನೀಡಿದ್ದು, ಈ ಹಿಂದೆ ಕಡೂರು ತಹಸೀಲ್ದಾರ್ ಆಗಿದ್ದ ಜೆ.ಉಮೇಶ್, ನಿವೃತ್ತ ಶಿರಸ್ತೇದಾರ್ ನಂಜುಂಡಯ್ಯ ಹಾಗೂ ಬೀರೂರು ಹೋಬಳಿ ರಾಜಸ್ವ ನಿರೀಕ್ಷಕರಾಗಿದ್ದ ಕಿರಣ್ ಕುಮಾರ್ ಈ ಮೂವರ ವಿರುದ್ಧ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು ಈ ದೂರಿನ ಹಿನ್ನೆಲೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ.

ಜೆ.ಉಮೇಶ್ ಇದೀಗ ಭೂ-ಸ್ವಾಧೀನಾಧಿಕಾರಿ ಸೀಬರ್ಡ್ ನೌಕಾನೆಲೆ ಕಾರವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಂಜುಂಡಪ್ಪ ಈಗಾಗಲೇ ವೃತ್ತಿಯಿಂದ ನಿವೃತ್ತಿಯಾಗಿದ್ದಾರೆ, ರಾಜಸ್ವ ನಿರೀಕ್ಷಕ ಕಿರಣ್‌ಕುಮಾರ್ (ಹಾಲಿ ನಿಲಂಭನೆ)ಯಲ್ಲಿ ಇದ್ದಾರೆ. ಪೌತಿ,ದಾನ,ಕ್ರಯದಂತೆ ಖಾತೆ ದಾಖಲಿಸಿರುವ ಕ್ರಮವು ನಿಯಮ ಬಾಹಿರವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಲು ಉಪ ವಿಭಾಗಾಧಿಕಾರಿಗಳು ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next