Advertisement

ಕಡೂರು ಕೊಲೆ- ಆತ್ಮಹತ್ಯೆಗೆ ಹೊಸ ಟ್ವಿಸ್ಟ್: ರೇವಂತ್ ಪ್ರಿಯತಮೆ ಬೆಂಗಳೂರಿನಲ್ಲಿ ಆತ್ಮಹತ್ಯೆ

10:11 AM Feb 24, 2020 | keerthan |

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಪಟ್ಟಣದಲ್ಲಿ ದಂತ ವೈದ್ಯ ರೇವಂತ್ ಪತ್ನಿ ಕವಿತಾ ಕೊಲೆ ಪ್ರಕರಣಕ್ಕೆ ಹೊಸ ತಿರುವು ಪಡೆಯುತ್ತಿದೆ.

Advertisement

ಪೊಲೀಸ್ ತನಿಖೆ ನಡೆಯುತ್ತಿರುವಾಗಲೇ ಶನಿವಾರ ಪತಿ ವೈದ್ಯ ಡಾ. ರೇವಂತ್ ಕಡೂರು ಸಮೀಪದ ಬಂಡಿಕೊಪ್ಪಲು ರೈಲ್ವೇ ಗೇಟ್ ಸಮೀಪ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಡಾ. ರೇವಂತ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಆತನ ಪ್ರಿಯತಮೆ ಹರ್ಷಿತಾ (32) ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ.

ಡಾ. ರೇವಂತ್ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯತಮೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ದಂತವೈದ್ಯ ರೇವಂತ್ ಜೊತೆ ಹರ್ಷಿತ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಹೇಳಲಾಗುತ್ತಿದ್ದು. ಪೊಲೀಸ್ ತನಿಖೆಯಿಂದ ತನ್ನ ಬಣ್ಣ ಬಯಲಾಗುತ್ತದೆ ಎಂದುಹೆದರ ವೈದ್ಯ ಆತ್ಮಹತ್ಯೆ ಗೆ ಶರಣಾಗಿದ್ದರು ಎನ್ನಲಾಗಿದೆ.

Advertisement

ಪ್ರಿಯತಮ ರೇವಂತ್ ಆತ್ಮಹತ್ಯೆ ಸುದ್ದಿ ಹರಡುತ್ತಿದ್ದಂತೆ ಬೆಂಗೂರಿನಲ್ಲಿ ಹರ್ಷಿತ ಆತ್ಮಹತ್ಯೆ ಗೆ ಶರಣಾಗಿದ್ದು, ಇಡೀ ಪ್ರಕರಣ ಮೂವರನ್ನು ಬಲಿಪಡೆದಿದೆ.

ಮಗನ ಸಾವಿನ ಸುದ್ದಿಗೆ ಡಾ. ರೇವಂತ್ ಅವರ ತಾಯಿ ಅಲುಮೇಲಮ್ಮ ಅವರಿಗೆ ನಿನ್ನೆಯೇ ಪ್ರಜ್ಞೆ ತಪ್ಪಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next