Advertisement

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

10:37 AM May 15, 2024 | Team Udayavani |

ಕಡೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪದ ಬ್ರಿಡ್ಜ್ ಬಳಿ ಬುಧವಾರ ಬೆಳಗ್ಗೆ ಡೀಸೆಲ್ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ.

Advertisement

ಮೃತ ದುರ್ದೈವಿ ಮಂಜುನಾಥ(40) ಎನ್ನುವವರಾಗಿದ್ದು, ಹಾಸನ ತಾಲೂಕಿನ ವಂಗೆರೆ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. 3 ಮಂದಿಗೆ ಗಂಭೀರ ಗಾಯಗಳಾಗಿದ್ದು ಹಾಸನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಟಿಯಲ್ಲಿದ್ದ ರಂಗಪ್ಪ, ಅಶ್ವಿನಿ, ಲಕ್ಷ್ಮಿ, ಭೂಮಿಕ, ನಾಗರಾಜು, ರುಕ್ಮಿಣಿ, ಪ್ರೀತಮ್, ಸಾಗರ್, ದೊರೆಸ್ವಾಮಿ, ಸಂಜಯ್ ಅವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ಚಾಲಕ ಮಣಿ ಕುಮಾರ್ ಅವರಿಗೂ ಪೆಟ್ಟಾಗಿದ್ದು ಕಡೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next