Advertisement

ವಿಧಾನಸಭೆಯಲ್ಲಿ ಸೋತ ಕಾಗೇರಿ, ಸುಧಾಕರ್‌, ಸೋಮಣ್ಣ, ಶೆಟ್ಟರ್‌ಗೆ ಗೆಲುವು

08:21 PM Jun 04, 2024 | Team Udayavani |

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಐವರು ಮಾಜಿ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಮರುಜನ್ಮ ಪಡೆದುಕೊಂಡಿದ್ದಾರೆ. ಆದರೆ ಇತರೆ ಮೂವರು ವಿಧಾನಸಭೆ ಹಾಗೂ ಲೋಕಸಭೆ ಎರಡೂ ಚುನಾವಣೆಯಲ್ಲೂ ಸೋಲು ಅನುಭವಿಸುವ ಮೂಲಕ ಆಘಾತಕ್ಕೆ ಒಳಗಾಗಿದ್ದಾರೆ.

Advertisement

ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ಲೋಕಸಭಾ ಚುನಾವಣೆಯ ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ (ಶಿರಸಿ) ಅವರು ಉತ್ತರ ಕನ್ನಡ, ಮಾಜಿ ಸಚಿವ ಡಾ. ಕೆ.ಸುಧಾಕರ್‌ (ಚಿಕ್ಕಬಳ್ಳಾಪುರ) ಅವರು ಚಿಕ್ಕಬಳ್ಳಾಪುರ, ಮಾಜಿ ಸಚಿವ ವಿ.ಸೋಮಣ್ಣ (ಗೋವಿಂದರಾಜನಗರ) ಅವರು ತುಮಕೂರು, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (ಹುಬ್ಬಳ್ಳಿ-ಧಾರವಾಡ ಕೇಂದ್ರ) ಅವರು ಬೆಳಗಾವಿ ಹಾಗೂ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಸಂಸತ್‌ ಪ್ರವೇಶಿಸಿದ್ದಾರೆ.

ಆದರೆ ಮಾಜಿ ಸಚಿವ ಬಿ.ಶ್ರೀರಾಮುಲು (ಬಳ್ಳಾರಿ), ಅಂಜಲಿ ನಿಂಬಾಳ್ಕರ್‌ (ಖಾನಾಪುರ) ಹಾಗೂ ಸೌಮ್ಯರೆಡ್ಡಿ (ಜಯನಗರ) ಅವರು ಕ್ರಮವಾಗಿ ಬಳ್ಳಾರಿ, ಉತ್ತರ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ ಈ ಸಲವೂ ಅವರಿಗೆ ಅದೃಷ್ಟ ಕೈಕೊಟ್ಟಿದೆ.

 

Advertisement

Udayavani is now on Telegram. Click here to join our channel and stay updated with the latest news.

Next