Advertisement

ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮೀಜಿಯವರ ಜನ್ಮದಿನದ ಅಂಗವಾಗಿ ಆಹಾರ ಕಿಟ್ ವಿತರಣೆ

03:48 PM Apr 24, 2020 | keerthan |

ದಾವಣಗೆರೆ: ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿಯವರ 44ನೇ ಜನ್ಮ ದಿನದ ಅಂಗವಾಗಿ ಶುಕ್ರವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆಹಾರದ ಕಿಟ್ ವಿತರಿಸಿದರು.

Advertisement

ತಮ್ಮ ಜನ್ಮ ದಿನದ ಹಿನ್ನೆಲೆಯಲ್ಲಿ ಯಾರೂ ಸಹ ಮಠಕ್ಕೆ ಬರುವುದು ಬೇಡ. ತಾವಿರುವ ಸ್ಥಳದಲ್ಲೇ ನಿರ್ಗತಿಕರು, ಅಗತ್ಯ ಇರುವರಿಗೆ ದವಸ ಧಾನ್ಯ, ಆಹಾರದ ಸಾಮಗ್ರಿಗಳನ್ನು ನೀಡುವಂತೆ ಕೋರಿದ್ದೆವು. ಅದರಂತೆ ಎಲ್ಲಾ ಕಡೆ ವಿತರಣೆ ಮಾಡಲಾಗುತ್ತಿದೆ.

ದಾವಣಗೆರೆಯಲ್ಲಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ವಿನಯ್ ಇತರರು 500 ಕಿಟ್ ನೀಡುತ್ತಿದ್ದಾರೆ ಎಂದು ತಿಳಿಸಿದರು. ಆಹಾರದ ಸಾಮಗ್ರಿ ನೀಡುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೋವಿಡ್-19 ಮಹಾಮಾರಿ ದೇಶದಿಂದ ನಿರ್ಮೂಲನೆ ಆಗುವವರೆಗೂ ಪ್ರತಿಯೊಬ್ಬರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂಬುದು ತಮ್ಮ ಮನವಿ. ಹಾಗಾಗಿ ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಕೋರಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next